Friday, June 27, 2025

ಕೊಳಂಬೆ: ಇನ್ನೂ ಆಗದ ರಸ್ತೆ ದುರಸ್ತಿ: ಪರಿಸರವಾಸಿಗಳಿಂದ ಮತದಾನ ಬಹಿಷ್ಕಾರ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಳಂಬೆ-ದಾಸರಬೆಟ್ಟು ರಸ್ತೆ ಇದುವರೆಗೂ ಡಾಂಬರೀಕರಣಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ನಾಮಫಲಕ ಅಳವಡಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ.

ವಿಟ್ಲ ಪೇಟೆಯಿಂದ ಕಂಬಳಬೆಟ್ಟು-ಕೊಳಂಬೆ-ದಾಸರಬೆಟ್ಟು ಸಂಪರ್ಕಿಸುವ ರಸ್ತೆಯೂ ಮಣ್ಣಿನಿಂದ ಕೂಡಿದ್ದು, ಈ ರಸ್ತೆಯೂ ಇದುವರೆಗೂ ಡಾಂಬರೀಕರಣಗೊಂಡಿಲ್ಲ. ಈ ಬಗ್ಗೆ ಇಲ್ಲಿಯ ಗ್ರಾಮಸ್ಥರು ಕಳೆದ 25 ವರ್ಷಗಳಿಂದ ಸ್ಥಳೀಯ ಸಂಸದರಿಗೆ, ಶಾಸಕರಿಗೆ ಹಾಗೂ ಪಟ್ಟಣ ಪಂಚಾಯಿತಿಗೆ ನಿರಂತರ ಮನವಿ ಸಲ್ಲಿಸುತ್ತಾ ಬಂದಿದ್ದಾರೆ. ಪ್ರತಿ ಚುನಾವಣೆ ಸಂದರ್ಭ ಭರವಸೆಗಳನ್ನು ಮಾತ್ರ ನೀಡಲಾಗುತ್ತಿದೆ ಹೊರತು ರಸ್ತೆ ಅಭಿವೃದ್ಧಿಪಡಿಸಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.


ಕಂಬಳಬೆಟ್ಟು-ಕೊಳಂಬೆ ವರೆಗಿನ ರಸ್ತೆಗೆ ಗ್ರಾಮಸ್ಥರು ನಿರಂತರ ಹೋರಾಟದ ಫಲವಾಗಿ ಆಗಿನ ಶಾಸಕಿ ಶಕುಂತಳಾ ಶೆಟ್ಟಿ ಅವರ ಮೂಲಕ ಸುಸಜ್ಜಿತ ಸೇತುವೆ ಹಾಗೂ ಡಾಂಬರೀಕರಣ ನಡೆಸಲಾಗಿತ್ತು. ಆದರೆ ಕೊಳಂಬೆಯಿಂದ ದಾಸರಬೆಟ್ಟು ರಸ್ತೆ ಇದುವರೆಗೂ ಅಭಿವೃದ್ಧಿ ಹೊಂದಿಲ್ಲ. ಇದರಿಂದ ಬೇಸತ್ತು ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ದಾಸರಬೆಟ್ಟು ಕಡೆಯಿಂದ ಮಂಗಳಪದವು ಮೂಲಕ ಮಂಗಳೂರು, ಕೊಡಾಜೆ, ಮಾಣಿ ಕಡೆಗೆ ಸಂಪರ್ಕ ಕಲ್ಪಿಸುತ್ತದೆ. ಇನ್ನೊಂದು ಕಡೆಯಿಂದ ಕಂಬಳಬೆಟ್ಟು-ಪುತ್ತೂರು-ವಿಟ್ಲ ಕಡೆಗೆ ಸಂಪರ್ಕ ಕಲ್ಪಿಸುತ್ತದೆ. ಮಣ್ಣಿ ರಸ್ತೆಯಿಂದ ಈ ರಸ್ತೆಯಲ್ಲಿ ಸಂಪರ್ಕ ಕಷ್ಟಸಾಧ್ಯ. ಬೇಸಿಗೆ ಕಾಲದಲ್ಲಿ ದೂಳಿನಿಂದಲೇ ಜನರು ಜೀವನ ನಡೆಸಬೇಕು. ಇದರಿಂದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣವೇ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...