Wednesday, February 12, 2025

ಕೊಳ್ನಾಡು: ಕೆ.ಎಸ್.ಆರ್.ಟಿ.ಸಿ.ಬಸ್ಸು ಸಂಚಾರಕ್ಕೆ ಮನವಿ

ವಿಟ್ಲ: ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ಹಾಗೂ ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರ ನೇತೃತ್ವದ ನಿಯೋಗ ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಚೇರಿಗೆ ಭೇಟಿ ನೀಡಿದ ಕೊಳ್ನಾಡು ಗ್ರಾಮಕ್ಕೆ ಕನ್ಯಾನದಿಂದ ಸಂಪರ್ಕ ಕಲ್ಪಿಸುವ ಕೆ.ಎಸ್.ಆರ್.ಟಿ.ಸಿ.ಬಸ್ಸು ಸೌಕರ್‍ಯ ಒದಗಿಸಲು ಮನವಿ ಮುಖಾಂತರ ಒತ್ತಾಯಿಸಿದರು ಮತ್ತು ಈ ಹಿಂದೆ ಗ್ರಾಮ ಸಭೆಯಲ್ಲಿ ಸಲ್ಲಿಸಿದ ಬೇಡಿಕೆ ಮಂಗಳೂರು, ಮುಡಿಪು, ಸಾಲೆತ್ತೂರು ಮೂಲಕ ಪುತ್ತೂರು ಸಾಗುವ ಬಸ್ಸು ಒದಗಿಸುವ ಬೇಡಿಕೆಯ ಪ್ರಗತಿ ಬಗ್ಗೆ ತಿಳಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಶೀಘ್ರದಲ್ಲಿ ಪ್ರಾಧಿಕಾರದಿಂದ ಪರವಾನಿಗೆ ದೊರಕಲಿದೆ. ಅನಂತರ ಬಸ್ಸು ಸೌಕರ್ಯ ಒದಗಿಸಲಾಗುವುದು ಮತ್ತು ಸದ್ರಿ ಮನವಿಯಲ್ಲಿರುವ ಕರೋಪಾಡಿ ಕನ್ಯಾನ ಕುಡ್ತಮುಗೇರು ಸೆರ್ಕಳ ಕಲ್ಲಡ್ಕ ಬಿ.ಸಿರೋಡ್ ಹಾಗೂ ಕರೋಪಾಡಿ ಕನ್ಯಾನ ಕುಳಾಲು ಸಾಲೆತ್ತೂರು ಮಂಚಿ ಬಿ.ಸಿರೋಡ್ ಹೊಸ ಮಾರ್ಗ ಅಲ್ಲದೆ ಈಗಾಗಲೇ ಇರುವ ಕೋಡಪದವು ಶರವು ಮದಕ ಬಸ್ಸನ್ನು ತಾಳಿತ್ತನೂಜಿಯವರೆಗೆ ವಿಸ್ತರಿಸುವುದಲ್ಲದೇ ಕೋಡಪದವು ಮಜ್ಜೋನಿ ಕುಡ್ತಮುಗೇರು ಬಸ್ಸು ರದ್ದಾಗಿರುವುದನ್ನು ಪುನರಾರಂಭಿಸುವುದಕ್ಕೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯ ಪವಿತ್ರ ಪೂಂಜ, ಟಿ. ಯೂಸುಫ್ ಉಪಸ್ಥಿತರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...