Tuesday, February 11, 2025

ಕೊಳ್ನಾಡು: ಎನ್.ಆರ್.ಎಲ್.ಎಂ ಸಂಜೀವಿನಿ ಹಾಗೂ ನರೇಗಾ ಮಾಹಿತಿ

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ ಸ್ವ-ಸಹಾಯ ಗುಂಪುಗಳಿಗೆ ಎನ್.ಆರ್.ಎಲ್.ಎಂ ಸಂಜೀವಿನಿ ಹಾಗೂ ನರೇಗಾ ಮಾಹಿತಿ ನಡೆಯಿತು.
ಸಭೆಯ ಆಧ್ಯಕ್ಷತೆ ವಹಿಸಿದ ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಸ್ವ-ಉದ್ಯೋಗ ನಡೆಸುವ ಗುಂಪು ಸದಸ್ಯರಿಗೆ ಒಕ್ಕೂಟದ ಮೂಲಕ ಒದಗಿಸುವ ಬಡ್ಡಿ ರಹಿತ ಸಾಲ ರೂಪದ ಹಣಕಾಸು ವ್ಯವಸ್ಥೆಯನ್ನು ಪಡೆದು ಸ್ವಾವಲಂಬಿಗಳಾಗಿ ಹಾಗೂ ಈಗಾಗಲೇ ಕೊಳ್ನಾಡು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಗುಂಪು ಸದಸ್ಯರು ಭಾಗವಹಿಸುತ್ತಿರುವುದು ಅಭಿನಂದನೀಯ. ಗ್ರಾಮ ಪಂಚಾಯಿತಿ ಆಡಳಿತ ಈ ಬಗ್ಗೆ ತರಬೇತಿ ಕಾರ್‍ಯಾಗಾರ ನಡೆಸುವುದರ ಜೊತೆಗೆ ಒಕ್ಕೂಟಗಳ ಕಚೇರಿಗೆ ಕೊಠಡಿ ಒದಗಿಸಲು ಬದ್ಧವಾಗಿದೆ ಎಂದರು.
ತಾಲೂಕು ಕಾರ್‍ಯನಿರ್ವಾಹಕ ಆಧಿಕಾರಿ ರಾಜಣ್ಣ ಮಾತನಾಡಿ ಅಣಬೆ ಕೃಷಿಯಂತಹ ಸುಲಭ ಸ್ವ-ಉದ್ಯೋಗವನ್ನು ಗ್ರಾಮೀಣ ಪ್ರದೇಶದ ಜನರು ಮಾಡಿದಲ್ಲಿ ಉತ್ತಮ ಮಾರುಕಟ್ಟೆ ಲಭ್ಯವಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾರುಕಟ್ಟೆ ನಿರ್‍ಮಿಸಲು ಅನುದಾನ ಕೂಡ ಒದಗಿಸಲಿದ್ದೇವೆ ಎಂದರು.
ಸಹಾಯಕ ನಿರ್ದೇಶಕರಾದ ಪ್ರಶಾಂತ್‌ರವರು ಸಂಜೀವಿನಿ ಹಾಗೂ ಉದ್ಯೋಗ ಖಾತರಿ ಯೋಜನೆಗಳ ಮಾಹಿತಿ ನೀಡಿದರು. ಪಂಚಾಯಿತಿ ಸದಸ್ಯರಾದ ಪವಿತ್ರ ಪೂಂಜ, ಜಯಂತಿ ಎಸ್ ಪೂಜಾರಿ, ಐರಿನ್ ಡಿಸೋಜ ಹಾಗೂ ಒಕ್ಕೂಟದ ಅಧ್ಯಕ್ಷರಾದ ಚಂದ್ರಕಲಾ ಭಾಗವಹಿಸಿದ್ದರು.
ಪಿಡಿಒ ಹರೀಶ್ ಕೆ.ಎ ಸ್ವಾಗತಿಸಿ, ವಂದಿಸಿದರು. ತಾಲೂಕು ಸಂಯೋಜಕರಾದ ಕುಶಾಲಪ್ಪರವರು ಕಾರ್‍ಯಕ್ರಮ ನಿರೂಪಿಸಿದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...