Friday, January 30, 2026

ಸಚಿವರಾಗಿ ಬಂಟ್ವಾಳಕ್ಕೆ ಆಗಮಿಸಿದ ಕೋಟ: ಶಾಸಕರ ನೇತ್ರತ್ವದಲ್ಲಿ ಸ್ವಾಗತ

ಬಂಟ್ವಾಳ: ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರಕಾರದಲ್ಲಿ ರಾಜ್ಯದ ನೂತನ ಸಂಪುಟದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮವಾಗಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

 

ಅದಕ್ಕೂ ಮೊದಲು ಮಾಣಿ ಜಂಕ್ಸನಲ್ಲಿ ಹಾಗೂ ಕಲ್ಲಡ್ಕ ಪೇಟೆಯಲ್ಲಿ ಕಾರ್ಯಕರ್ತರು ಸಾಲು ಹೊದಿಸಿ ಸ್ವಾಗತಿಸಿದರು, ಹಾಗೂ ಜೈಕಾರ ಕೂಗಿದರು.
ಸಿಹಿ ತಿಂಡಿ ತಿನಿಸು ವ ಮೂಲಕ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ , ಎ.ಗೋವಿಂದ ಪ್ರಭು,ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ , ಬಿಜೆಪಿ ಪ್ರಮುಖರಾದ ರಮಾನಾಥ ರಾಯಿ,ಪ್ರಕಾಶ್ ಅಂಚನ್,ರಂಜಿತ್ ಮೈರಾ,ಪ್ರಮೋದ್ ಅಜ್ಜಿಬೆಟ್ಟು,ಗೋಪಾಲ ಸುವರ್ಣ,ಸುರೇಶ್ ನರಿಕೊಂಬು,ಧನಂಜಯ ಶೆಟ್ಟಿ ಸರಪಾಡಿ,ಯಶೋಧರ ಕರ್ಬೆಟ್ಟು,ಸುದರ್ಶನ್ ಬಜ,ಮಹಾಬಲ ಶೆಟ್ಟಿ ,ಪುರುಷೋತ್ತಮ ಶೆಟ್ಟಿ ವಾಮದಪದವು,ಖಲೀಲ್ , ಪ್ರವೀಣ್ ಗಟ್ಟಿ, ದಿನೇಶ್ ದಂಬೆದಾರ್,ಉಮೇಶ್ ಅರಳ,ವಿದ್ಯಾವತಿ ಅಜ್ಜಿಬೆಟ್ಟು,ಗಣೇಶ್ ದಾಸ್,ಚಂದ್ರಶೇಖರ್ ವಾಮದಪದವು,ಯತಿನ್ ಶೆಟ್ಟಿ ,ಕಾರ್ತಿಕ್ ಬಳ್ಳಾಲ್,ಪ್ರದೀಪ್ ಅಜ್ಜಿಬೆಟ್ಟು,ಲೋಹಿತ್ ಕೊಳ್ನಾಡು,ಗುರುದತ್ ನಾಯಕ್,ಪ್ರತೀಶ್ ಅಜ್ಜಿಬೆಟ್ಟು,ಮನೋಜ್ ಕೋಟ್ಯಾನ್ ಮತ್ತು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...