Thursday, February 13, 2025

ವಿಟ್ಲ: ಕೋಟಿ-ಚೆನ್ನಯ ಬಿಲ್ಲವ ಕ್ರೀಡಾಕೂಟ

ವಿಟ್ಲ: ವಿಟ್ಲ ಬಿಲ್ಲವ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಭಾನುವಾರ ವಿಟ್ಲ ವಿಠಲ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಕೋಟಿ-ಚೆನ್ನಯ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ ಪಾಣೆಮಜಲು ಉದ್ಘಾಟಿಸಿ ಕ್ರೀಡಾಕೂಟದೊಂದಿಗೆ ಸಂಘಟನಾ ಶಕ್ತಿಯನ್ನು ಹೆಚ್ಚಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.
ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಡಾ. ಗೀತಪ್ರಕಾಶ್ ಮಾತನಾಡಿ ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡಾಗ ಮಾತ್ರ ಕ್ರೀಡಾಕೂಟಗಳು ಅರ್ಥಪೂರ್ಣವೆನಿಸುವುದು. ಬಿಲ್ಲವ ಸಮಾಜದ ಯುವಶಕ್ತಿ ಇಂತಹ ಕಾರ್‍ಯಕ್ರಮಗಳಲ್ಲಿ ಭಾಗಿಗಳಾದಾಗ ಮಾತ್ರ ಸಂಘಟನೆ ಸದೃಢವಾಗಿ ಬೆಳೆಯಬಹುದು ಎಂದರು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಸುಜಾತ ಸಂಜೀವ ಪೂಜಾರಿ, ಪುಷ್ಪಾ ಸುಂದರ ಪೂಜಾರಿ ಉಕ್ಕುಡ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಸುವರ್ಣ, ನಿರ್ದೇಶಕರಾದ ಮಾಧವ ಪಟ್ಲ, ರಮೇಶ್ ಕುಮಾರ್ ಆರ್.ಎಸ್., ಕ್ರೀಡಾ ಕಾರ್‍ಯದರ್ಶಿ ಜಯಪ್ರಕಾಶ್ ಪಾಣೆಮಜಲು, ಉದ್ಯಮಿ ಹರೀಶ್ ವಿಟ್ಲ, ಬಿಲ್ಲವ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್‍ಯನಿರ್ವಹಣಾಧಿಕಾರಿ ಜಯಂತ ಪಿ. ಸ್ವಾಗತಿಸಿದರು. ನಿರ್ದೇಶಕ ಸಂಜೀವ ಎಂ. ಕಾರ್‍ಯಕ್ರಮ ನಿರೂಪಿಸಿ ವಂದಿಸಿದರು.
ಸಭೆಯ ಬಳಿಕ ಮಕ್ಕಳ ವಿಭಾಗ, ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ನಾನಾ ತಂಡ ಹಾಗೂ ವೈಯಕ್ತಿಕ ಆಟೋಟಗಳು ನಡೆದವು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...