Friday, July 11, 2025

ಮರಾಟಿ ಯುವ ವೇದಿಕೆ (ರಿ) ವಿಟ್ಲ ಇದರ ವಾರ್ಷಿಕ ಕ್ರೀಡಾಕೂಟ

ವಿಟ್ಲ: ನಮ್ಮ ಮರಾಟಿ ಯುವ ವೇದಿಕೆ (ರಿ.) ವಿಟ್ಲ ಇದರ ವತಿಯಿಂದ ಫೆಬ್ರವರಿ ತಾರೀಕು 3 ಭಾನುವಾರದಂದು 6 ನೇ ವರ್ಷದ ಕ್ರೀಡಾಕೂಟವು ವಿಟ್ಲದ  ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಗಾಯತ್ರಿ ವಕೀಲರು ಮಂಗಳೂರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪೂವಪ್ಪ ನಾಯ್ಕ ಅಮೈ  SBI ನಿವೃತ್ತ ಪ್ರಬಂಧಕರು ಹಾಗೂ ದಿನೇಶ್ ನಾಯ್ಕ ಪಟ್ಟುಮೂಲೆ ಉದ್ಯಮಿಗಳು ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ ಹಲವಾರು     ಜಿಲ್ಲಾ ಹಾಗೂ ತಾಲೂಕುಗಳ ಮರಾಟಿ ಸಮಾಜ ಭಾಂದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
 ಸಂಜೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಿಮ್ಮಪ್ಪ ನಾಯ್ಕ  ಪೊಲೀಸ್ ನಿರೀಕ್ಷಕರು ಪುತ್ತೂರು ನಗರ ಠಾಣೆ, ಕುಶಾಲಪ್ಪ ನಾಯ್ಕ ಅಧ್ಯಕ್ಷರು ಕಡಬ ಮರಾಟಿ ಸಂಘ, ಚೆನ್ನಪ್ಪ ನಾಯ್ಕ PDO ಮಲವಂತಿಗೆ, ರೂಪಾಶ್ರೀ ಉಪನ್ಯಾಸಕರು ವಿಠಲ ಪದವಿ ಪೂರ್ವ ಕಾಲೇಜ್ ವಿಟ್ಲ ಭಾಗವಹಿಸಿದ್ದರು.
ಮರಾಟಿ ಯುವ ವೇದಿಕೆ  ಅಧ್ಯಕ್ಷರಾದ ಜೀವನ್ ಅನ್ನಮೂಲೆ, ಉಪಾಧ್ಯಕ್ಷೆ ನವೀನಾ ಕುಮಾರಿ ಉಪಸ್ಥಿತರಿದ್ದರು.
ಮರಾಟಿ ಯುವ ವೇದಿಕೆ ಸದಸ್ಯ ರಾದ ದಿವ್ಯಶ್ರೀ ನಿರೂಪಿಸಿ,ಶಿಲ್ಪಾ ಹಾಗೂ ವಾಣಿ ಶ್ರೀ ಪ್ರಾರ್ಥಿಸಿ, ವನಜಾ ಹಾಗೂ ಭವ್ಯ ವಂದಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...