Friday, January 30, 2026

ಮರಾಟಿ ಯುವ ವೇದಿಕೆ (ರಿ) ವಿಟ್ಲ ಇದರ ವಾರ್ಷಿಕ ಕ್ರೀಡಾಕೂಟ

ವಿಟ್ಲ: ನಮ್ಮ ಮರಾಟಿ ಯುವ ವೇದಿಕೆ (ರಿ.) ವಿಟ್ಲ ಇದರ ವತಿಯಿಂದ ಫೆಬ್ರವರಿ ತಾರೀಕು 3 ಭಾನುವಾರದಂದು 6 ನೇ ವರ್ಷದ ಕ್ರೀಡಾಕೂಟವು ವಿಟ್ಲದ  ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಗಾಯತ್ರಿ ವಕೀಲರು ಮಂಗಳೂರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪೂವಪ್ಪ ನಾಯ್ಕ ಅಮೈ  SBI ನಿವೃತ್ತ ಪ್ರಬಂಧಕರು ಹಾಗೂ ದಿನೇಶ್ ನಾಯ್ಕ ಪಟ್ಟುಮೂಲೆ ಉದ್ಯಮಿಗಳು ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ ಹಲವಾರು     ಜಿಲ್ಲಾ ಹಾಗೂ ತಾಲೂಕುಗಳ ಮರಾಟಿ ಸಮಾಜ ಭಾಂದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
 ಸಂಜೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಿಮ್ಮಪ್ಪ ನಾಯ್ಕ  ಪೊಲೀಸ್ ನಿರೀಕ್ಷಕರು ಪುತ್ತೂರು ನಗರ ಠಾಣೆ, ಕುಶಾಲಪ್ಪ ನಾಯ್ಕ ಅಧ್ಯಕ್ಷರು ಕಡಬ ಮರಾಟಿ ಸಂಘ, ಚೆನ್ನಪ್ಪ ನಾಯ್ಕ PDO ಮಲವಂತಿಗೆ, ರೂಪಾಶ್ರೀ ಉಪನ್ಯಾಸಕರು ವಿಠಲ ಪದವಿ ಪೂರ್ವ ಕಾಲೇಜ್ ವಿಟ್ಲ ಭಾಗವಹಿಸಿದ್ದರು.
ಮರಾಟಿ ಯುವ ವೇದಿಕೆ  ಅಧ್ಯಕ್ಷರಾದ ಜೀವನ್ ಅನ್ನಮೂಲೆ, ಉಪಾಧ್ಯಕ್ಷೆ ನವೀನಾ ಕುಮಾರಿ ಉಪಸ್ಥಿತರಿದ್ದರು.
ಮರಾಟಿ ಯುವ ವೇದಿಕೆ ಸದಸ್ಯ ರಾದ ದಿವ್ಯಶ್ರೀ ನಿರೂಪಿಸಿ,ಶಿಲ್ಪಾ ಹಾಗೂ ವಾಣಿ ಶ್ರೀ ಪ್ರಾರ್ಥಿಸಿ, ವನಜಾ ಹಾಗೂ ಭವ್ಯ ವಂದಿಸಿದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...