Saturday, February 8, 2025

ಮರಾಟಿ ಯುವ ವೇದಿಕೆ (ರಿ) ವಿಟ್ಲ ಇದರ ವಾರ್ಷಿಕ ಕ್ರೀಡಾಕೂಟ

ವಿಟ್ಲ: ನಮ್ಮ ಮರಾಟಿ ಯುವ ವೇದಿಕೆ (ರಿ.) ವಿಟ್ಲ ಇದರ ವತಿಯಿಂದ ಫೆಬ್ರವರಿ ತಾರೀಕು 3 ಭಾನುವಾರದಂದು 6 ನೇ ವರ್ಷದ ಕ್ರೀಡಾಕೂಟವು ವಿಟ್ಲದ  ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಗಾಯತ್ರಿ ವಕೀಲರು ಮಂಗಳೂರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪೂವಪ್ಪ ನಾಯ್ಕ ಅಮೈ  SBI ನಿವೃತ್ತ ಪ್ರಬಂಧಕರು ಹಾಗೂ ದಿನೇಶ್ ನಾಯ್ಕ ಪಟ್ಟುಮೂಲೆ ಉದ್ಯಮಿಗಳು ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ ಹಲವಾರು     ಜಿಲ್ಲಾ ಹಾಗೂ ತಾಲೂಕುಗಳ ಮರಾಟಿ ಸಮಾಜ ಭಾಂದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
 ಸಂಜೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಿಮ್ಮಪ್ಪ ನಾಯ್ಕ  ಪೊಲೀಸ್ ನಿರೀಕ್ಷಕರು ಪುತ್ತೂರು ನಗರ ಠಾಣೆ, ಕುಶಾಲಪ್ಪ ನಾಯ್ಕ ಅಧ್ಯಕ್ಷರು ಕಡಬ ಮರಾಟಿ ಸಂಘ, ಚೆನ್ನಪ್ಪ ನಾಯ್ಕ PDO ಮಲವಂತಿಗೆ, ರೂಪಾಶ್ರೀ ಉಪನ್ಯಾಸಕರು ವಿಠಲ ಪದವಿ ಪೂರ್ವ ಕಾಲೇಜ್ ವಿಟ್ಲ ಭಾಗವಹಿಸಿದ್ದರು.
ಮರಾಟಿ ಯುವ ವೇದಿಕೆ  ಅಧ್ಯಕ್ಷರಾದ ಜೀವನ್ ಅನ್ನಮೂಲೆ, ಉಪಾಧ್ಯಕ್ಷೆ ನವೀನಾ ಕುಮಾರಿ ಉಪಸ್ಥಿತರಿದ್ದರು.
ಮರಾಟಿ ಯುವ ವೇದಿಕೆ ಸದಸ್ಯ ರಾದ ದಿವ್ಯಶ್ರೀ ನಿರೂಪಿಸಿ,ಶಿಲ್ಪಾ ಹಾಗೂ ವಾಣಿ ಶ್ರೀ ಪ್ರಾರ್ಥಿಸಿ, ವನಜಾ ಹಾಗೂ ಭವ್ಯ ವಂದಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...