ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು.



ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ, ಸಾಹಿತ್ಯ, ಕೃಷಿ ಎಲ್ಲವೂ ನಮಗೆ ಅವಶ್ಯಕತೆಯಿದೆ. ಇಂತಹ ಕಾರ್ಯಕ್ರಮಗಳ ಮೂಲಕ ತುಳುವರಲ್ಲಿರುವ ವಿಶೇಷತೆಗಳನ್ನು ಅರಿಯುವ ಕಾರ್ಯವಾಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಒಡಿಯೂರು ಶ್ರೀ ಜನ್ಮ ದಿನೋತ್ಸವ ಸಮಿತಿ ಆಶ್ರಯದಲ್ಲಿ ಒಡಿಯೂರು ಶ್ರೀ ಜನ್ಮ ದಿನೋತ್ಸವ, ಗ್ರಾಮೋತ್ಸವದ ಅಂಗವಾಗಿ ಬನಾರಿ ಗದ್ದೆಯಲ್ಲಿ ಕೆಸರ್ ದ ಕಂಡೊಡೊಂಜಿ ದಿನೊ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸಾಧ್ವಿ ಶ್ರೀ ಮಾತಾನಂದಮಯಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಬಗೆಗಳ ಸ್ಪರ್ಧೆಗಳು ನಡೆದವು. ಯಶವಂತ ವಿಟ್ಲ ಸ್ವಾಗತಿಸಿದರು. ಗಣಪತಿ ಭಟ್ ಸೇರಾಜೆ ವಂದಿಸಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಡ ಕಾರ್ಯಕ್ರಮ ನಿರೂಪಿಸಿದರು. ನಗದು ಬಹುಮಾನವನ್ನು ಕೀರ್ತನ್ ರೈ ಪಡೆದುಕೊಂಡರು.












