Thursday, June 26, 2025

ವೇದಿಕೆಯಲ್ಲೇ ತೊಟ್ಟಿಲಲ್ಲಿ ಮಲಗಿದ ಮುದ್ದು ಕೃಷ್ಣ

ಬಿ.ಸಿ.ರೋಡ್ : ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ವೇದಿಕೆಯಲ್ಲಿಯೇ ತಾಯಿಗೆ ಮಡಿಲು ತುಂಬಿಸಿ ನಂತರ ತಾಯಿ ಹಾಗೂ ಪುಟ್ಟಕೃಷ್ಣನಿಗೆ ಮುತೈದರಿಂದ ಆರತಿ ಬೆಳಗಸಿ ಬಾಲಕೃಷ್ಣನನ್ನು ತೊಟ್ಟಿಲಲ್ಲಿ ಮಲಗಿಸಿ ಜೋಗುಳ ಹಾಡಿ ಮಗುವನ್ನು ಮಲಗಿಸಿದ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಅಕ್ಕಮಹಾದೇವಿ ಶಿಶು ಮಂದಿರದ ಸದಸ್ಯರಿಂದ ನಡೆಯಿತು.


ಶುಕ್ರವಾರ ಅಜ್ಜಿಬೆಟ್ಟು ಶಾಲಾ ಮೈದಾನದಲ್ಲಿ ಸ್ನೇಹಾಂಜಲಿ ಸೇವಾ ಸಂಘದ ವತಿಯಿಂದ ೨೭ನೇ ಮೊಸರು ಕುಡಿಕೆ ಉತ್ಸವವು ಬೆಳಿಗ್ಗೆ ಉದ್ಘಾಟನಾ ಸಮಾರಂಭದ ನಂತರ ಶಿಶು ಮಂದಿರದ ೩ ವರ್ಷದಿಂದ ೫ ವರ್ಷದೊಳಗಿನ ಪುಟಾಣಿಗಳಿಂದ ಕೃಷ್ಣನ ಭಜನೆ, ಈ ದಿನದ ಪಂಚಾಂಗ, ಕಬೀರ ದ್ಯೋಹ, ಅಮೃತ ವಚನ, ಸರ್ವಜ್ಞನ ವಚನ, ಮಂಕುತಿಮ್ಮ ಕಗ್ಗ, ೧೫ ತಿಥಿಗಳ ಹೆಸರು ಹಾಗೂ ಕೃಷ್ಣನ ಹಾಡಿಗೆ ಕುಣಿತ ಹೀಗೆ ವಿವಿಧ ಶೈಲಿಯಲ್ಲಿ ಕಾರ್ಯಕ್ರಮ ನಡೆಯಿತು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಶಿಶುಮಂದಿರದ ಶಿಕ್ಷಕಿಯರಾದ ಶಶಿಪ್ರಭಾ, ನೀತಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಕಾರ್ಯಕ್ರಮವನ್ನು ಅಜ್ಜಿಬೆಟ್ಟು ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯಿನಿ ಕುಶಲ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೃಷಿಕ ಮೋಹನ ಪೂಜಾರಿ ಉಪಸ್ಥಿತರಿದ್ದರು. ಗೌರವಾದ್ಯಕ್ಷ ಪ್ರಮೋದ್ ಕುಮಾರ್, ಅಧ್ಯಕ್ಷ ಉದಯ ಅಮೀನ್, ಕಾರ್ಯದರ್ಶಿ ಜಯಂತ ಅಗ್ರಬೈಲು, ಕೋಶಾಧಿಕಾರಿ ನಿತಿನ್ ಮಿತ್ತಬೈಲು, ಬೇಬಿ ಕುಂದರ್, ನಾಗೇಶ್ ಅಜ್ಜಿಬೆಟ್ಟು, ರಾಜೇಶ್ ಅಜ್ಜಿಬೆಟ್ಟು, ಲಕ್ಷ್ಮಣ ಅಗ್ರಬೈಲು ಕಾರ್ಯಕ್ರಮಕ್ಕೆ ಸಹಕರಿಸಿದ್ದರು

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...