Sunday, February 9, 2025

ವೇದಿಕೆಯಲ್ಲೇ ತೊಟ್ಟಿಲಲ್ಲಿ ಮಲಗಿದ ಮುದ್ದು ಕೃಷ್ಣ

ಬಿ.ಸಿ.ರೋಡ್ : ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ವೇದಿಕೆಯಲ್ಲಿಯೇ ತಾಯಿಗೆ ಮಡಿಲು ತುಂಬಿಸಿ ನಂತರ ತಾಯಿ ಹಾಗೂ ಪುಟ್ಟಕೃಷ್ಣನಿಗೆ ಮುತೈದರಿಂದ ಆರತಿ ಬೆಳಗಸಿ ಬಾಲಕೃಷ್ಣನನ್ನು ತೊಟ್ಟಿಲಲ್ಲಿ ಮಲಗಿಸಿ ಜೋಗುಳ ಹಾಡಿ ಮಗುವನ್ನು ಮಲಗಿಸಿದ ಕಾರ್ಯಕ್ರಮ ಬಿ.ಸಿ.ರೋಡಿನ ಅಜ್ಜಿಬೆಟ್ಟು ಅಕ್ಕಮಹಾದೇವಿ ಶಿಶು ಮಂದಿರದ ಸದಸ್ಯರಿಂದ ನಡೆಯಿತು.


ಶುಕ್ರವಾರ ಅಜ್ಜಿಬೆಟ್ಟು ಶಾಲಾ ಮೈದಾನದಲ್ಲಿ ಸ್ನೇಹಾಂಜಲಿ ಸೇವಾ ಸಂಘದ ವತಿಯಿಂದ ೨೭ನೇ ಮೊಸರು ಕುಡಿಕೆ ಉತ್ಸವವು ಬೆಳಿಗ್ಗೆ ಉದ್ಘಾಟನಾ ಸಮಾರಂಭದ ನಂತರ ಶಿಶು ಮಂದಿರದ ೩ ವರ್ಷದಿಂದ ೫ ವರ್ಷದೊಳಗಿನ ಪುಟಾಣಿಗಳಿಂದ ಕೃಷ್ಣನ ಭಜನೆ, ಈ ದಿನದ ಪಂಚಾಂಗ, ಕಬೀರ ದ್ಯೋಹ, ಅಮೃತ ವಚನ, ಸರ್ವಜ್ಞನ ವಚನ, ಮಂಕುತಿಮ್ಮ ಕಗ್ಗ, ೧೫ ತಿಥಿಗಳ ಹೆಸರು ಹಾಗೂ ಕೃಷ್ಣನ ಹಾಡಿಗೆ ಕುಣಿತ ಹೀಗೆ ವಿವಿಧ ಶೈಲಿಯಲ್ಲಿ ಕಾರ್ಯಕ್ರಮ ನಡೆಯಿತು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಶಿಶುಮಂದಿರದ ಶಿಕ್ಷಕಿಯರಾದ ಶಶಿಪ್ರಭಾ, ನೀತಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಕಾರ್ಯಕ್ರಮವನ್ನು ಅಜ್ಜಿಬೆಟ್ಟು ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯಿನಿ ಕುಶಲ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೃಷಿಕ ಮೋಹನ ಪೂಜಾರಿ ಉಪಸ್ಥಿತರಿದ್ದರು. ಗೌರವಾದ್ಯಕ್ಷ ಪ್ರಮೋದ್ ಕುಮಾರ್, ಅಧ್ಯಕ್ಷ ಉದಯ ಅಮೀನ್, ಕಾರ್ಯದರ್ಶಿ ಜಯಂತ ಅಗ್ರಬೈಲು, ಕೋಶಾಧಿಕಾರಿ ನಿತಿನ್ ಮಿತ್ತಬೈಲು, ಬೇಬಿ ಕುಂದರ್, ನಾಗೇಶ್ ಅಜ್ಜಿಬೆಟ್ಟು, ರಾಜೇಶ್ ಅಜ್ಜಿಬೆಟ್ಟು, ಲಕ್ಷ್ಮಣ ಅಗ್ರಬೈಲು ಕಾರ್ಯಕ್ರಮಕ್ಕೆ ಸಹಕರಿಸಿದ್ದರು

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...