Thursday, February 13, 2025

ಸರಕಾರಿ ಬಸ್, ಕಾರು ಢಿಕ್ಕಿ: ಕಾರು ಚಾಲಕ ಗಂಭೀರ ಗಾಯ

ಬಂಟ್ವಾಳ : ಸರಕಾರಿ ಬಸ್ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ಸಂಭವಿಸಿದೆ.

ಕಾರು ಚಾಲಕ, ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಅವರು ಗಾಯಾಳುವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಬಸ್, ವಗ್ಗ ಕಡೆಗೆ ಸಾಗುತ್ತಿದ್ದ ಕಾರ್‌ಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಯಲ್ಲಿ ಕಾರಿನ ಮುಂಭಾಗ ಬಸ್‌ನ ಅಡಿಯಲ್ಲಿ ಸಿಲುಕಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಬಳಿಕ ಬಸ್‌ಅನ್ನು ಹಿಂತೆಗೆದು ಕಾರು ಚಾಲಕನನ್ನು ಹೊರ ತೆಗೆಯಲಾಗಿತ್ತು. ತತ್‌ಕ್ಷಣವೇ ಸ್ಥಳೀಯರು ಖಾಸಗಿ ಅಂಬ್ಯಲೆನ್ಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಿರಿಲ್ ಅವರ ಕಾಲು ಮುರಿತಗೊಂಡಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂದರ್ಭದಲ್ಲಿ ಬಸ್ ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಬಂಟ್ವಾಳ ಟ್ರಾಫಿಕ್ ಎಸ್ ಐ.ಸುತೇಶ್ , ಬಂಟ್ವಾಳ ಗ್ರಾಮಾಂತರ ಎಸ್‌ಐ ಹರೀಶ್ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಈ ಸ್ಥಳದಲ್ಲಿ ಪದೇಪದೇ ಅಪಘಾತಗಳಾಗುತ್ತಿದ್ದು, ಹೆದ್ದಾರಿ ಅಭಿವೃದ್ಧಿ ಸಮಯದಲ್ಲಿ ಅವೈಜ್ಞಾನಿಕ ತಿರುವು ನೀಡಿರುವುದು ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ರಸ್ತೆ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಲು ಹೆದ್ದಾರಿ ಪ್ರಾಽಕಾರಕ್ಕೆ ಮನವಿ ಮಾಡುವುದಾಗಿ ಟ್ರಾಫಿಕ್ ಎಸ್‌ಐ ಸುತೇಶ್‌ಅವರು ತಿಳಿಸಿದ್ದಾರೆ.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...