Wednesday, February 12, 2025

ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಪೋಲೀಸರ ನಿರ್ಬಂಧ: ಪೊಳಲಿ ಬ್ರಹ್ಮಕಲಶೋತ್ಸವಕ್ಕೆ ತೆರಳುವ ಭಕ್ತರಿಗೆ ಸಂಕಷ್ಟ

ಬಂಟ್ವಾಳ: ಸರ್ವೀಸ್ ರಸ್ತೆಯಲ್ಲಿ ಸರಕಾರಿ ಖಾಸಗಿ ಬಸ್ ಗಳ ಸಂಚಾರಕ್ಕೆ ನಿರ್ಬಂಧ ಹೇರಿದ ಬಂಟ್ವಾಳ ಪೋಲಿಸರು.
ಟ್ರಾಫಿಕ್ ಜಾಮ್ ಸಮಸ್ಯೆ ಯ ನೆಪವೊಡ್ಟಿ ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಸೋಮವಾರದಿಂದ ನಿರ್ಬಂಧ ಹೇರಲಾಗಿದ್ದು , ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸುವಂತಾಗಿದೆ.

ಪೊಳಲಿ ರಾಜರಾಜೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವಕ್ಕೆ ತೆರಳುವ ಭಕ್ತಾದಿಗಳಿಗೆ ಸಂಕಷ್ಟ ನೀಡಿದ ಪೋಲೀಸ್ ಇಲಾಖೆ.
ಹಲವು ವರ್ಷಗಳಿಂದ ಸರ್ವೀಸ್ ರಸ್ತೆಯಲ್ಲಿ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದ್ದು, ಸೋಮವಾರದಿಂದ ಏಕಾಏಕಿ ಬಸ್ ಸಂಚಾರ ಮಾಡದಂತೆ ಬಂಟ್ವಾಳ ಟ್ರಾಫಿಕ್ ಪೋಲೀಸರು ತಡೆಯೊಡ್ಡಿ ನೇರವಾಗಿ ಅರ್ದ ಮೈಲು ದೂರವಿರುವ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಕ್ಕೆ ಖಾಸಗಿ ಹಾಗೂ ಸರಕಾರಿ ಬಸ್ ಗಳನ್ನು ಕಳುಹಿಸಲಾಗುತ್ತಿದೆ.
ದೂರದೂರಿನಿಂದ ಬರುವ ಪ್ರಯಾಣಿಕರಿಗೆ ಯಾವುದೇ ಪೂರ್ವ ಮಾಹಿತಿಯಿಲ್ಲದ ಈ ಪೋಲೀಸರ ನಡೆಯಿಂದ ಸಾಕಷ್ಟು ತೊಂದರೆ ಅನುಭವಿಸದ್ದಾರೆ.
ಉರಿಯುವ ಬಿಸಿಲಿಗೆ ವೃದ್ದರು, ಮಕ್ಕಳನ್ನು ಹಿಡಿದುಕೊಂಡು ತಾಯಂದಿರು ಅತ್ತ ಇತ್ತ ಅಲೆದಾಡುವ ರೀತಿ ನೋಡಿದರೆ ಕಲ್ಲು ಹೃದಯವೂ ಒಮ್ಮೆ ಕರಗುತ್ತದೆ.


ಪೊಳಲಿ ಬ್ರಹ್ಮಕಲಶೋತ್ಸವದ ಈ ಸಂದರ್ಭದಲ್ಲಿ ಊರ ಪರ ಊರ ಭಕ್ತರು ಬಿಸಿರೋಡ್ ಗೆ ಬಂದು ಬಸ್ ಬದಲು ಮಾಡಿ ಹೋಗುವ ಸಂದರ್ಭದಲ್ಲಿ ಇವರಿಗೆ ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಅವರು ದೂರಿಕೊಂಡಿದ್ದಾರೆ.
ಇದು ಪೋಲೀಸರಿಗೆ ಸುಲಭವಾಗಲು ಮಾಡಿದ್ದು ಬಿಟ್ಟರೆ ಪ್ರಯಾಣಿಕರಿಗೆ ಇದರಿಂದ ತೊಂದರೆ ಯಾಗುತ್ತಿದೆ ಎಂದು ಪ್ರಯಾಣಿಕ ನೋರ್ವ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸಾರ್ವಜನಿಕರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಈ ಬಗ್ಗೆ ಮನವಿ ಮಾಡಿಕೊಂಡರು ಸಂಬಂಧಿಸಿದ ಅಧಿಕಾರಿಗಳು ಇದು ಮುಂದಿನ ದಿನಗಳಲ್ಲಿ ಬಿಸಿರೋಡ್ ಬದಲಾವಣೆ ಮಾಡುವ ದೀರ್ಘಕಾಲದ ಚಿಂತನೆ , ಜನ ಹೊಂದಿಕೊಂಡು ಹೋಗಬೇಕು ಎಂದು ಹೇಳಿ ಮೌನವಾಗಿದ್ದಾರೆ.
ಇಂದು ಬಿಸಿರೋಡ್ ಸರ್ವೀಸ್ ರಸ್ತೆಯಲ್ಲಿ ಬ್ಯಾನರ್ ಒಂದನ್ನು ಸಂಚಾರಿ ಪೋಲೀಸ್ ಠಾಣೆ ಹಾಕಿದೆ. ಸರ್ವೀಸ್ ರಸ್ತೆಯಲ್ಲಿ ಬಸ್ ಬರುವುದಿಲ್ಲ , ಕೆ.ಎಸ್.ಆರ್.ಟಿ.ಸಿ.ಬಳಿ ಪ್ರಯಾಣಿಕರು ಹೋಗಬೇಕು ಎಂಬ ಬ್ಯಾನರ್ ಹಾಕಲಾಗಿದೆ.
ಕಳೆದ ಮೂರು ದಿನಗಳಿಂದ ಜನ ಸುತ್ತಾಡಿ ಸುಸ್ತಾಗಿದ್ದಾರೆ.
ತಾಲೂಕು ಪಂಚಾಯತ್ ನಿಂದ ಹಿಡಿದು ಎಲ್ಲಾ ಕಚೇರಿಗಳು ಸರ್ವೀಸ್ ರಸ್ತೆಯಲ್ಲಿ ಹಿಂದೆ ಬಸ್ ನಿಲುಗಡೆಯಾಗುತ್ತಿದ್ದ ಸ್ಥಳ ದಲ್ಲಿ ಇರುವುದರಿಂದ ಜನರಿಗೆ ಅನುಕೂಲವಾಗುತ್ತಿತ್ತು.
ಜನರಿಗೆ ತೊಂದರೆಯಾಗುವ ಈ ಯೋಜನೆ ಯಾಕೆ ಬೇಕು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಯಾದರೆ ಅಲ್ಲಿ ಪೋಲೀಸರ ನೇಮಕಮಾಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಾಗಿತ್ತು ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.
ಒಟ್ಟಿನಲ್ಲಿ ಜನರ ತೊಂದರೆ ಯಾಗುವ ಈ ವ್ಯವಸ್ಥೆ ಗಳನ್ನು ಬದಲಾಯಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...