Friday, January 30, 2026

ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಪೋಲೀಸರ ನಿರ್ಬಂಧ: ಪೊಳಲಿ ಬ್ರಹ್ಮಕಲಶೋತ್ಸವಕ್ಕೆ ತೆರಳುವ ಭಕ್ತರಿಗೆ ಸಂಕಷ್ಟ

ಬಂಟ್ವಾಳ: ಸರ್ವೀಸ್ ರಸ್ತೆಯಲ್ಲಿ ಸರಕಾರಿ ಖಾಸಗಿ ಬಸ್ ಗಳ ಸಂಚಾರಕ್ಕೆ ನಿರ್ಬಂಧ ಹೇರಿದ ಬಂಟ್ವಾಳ ಪೋಲಿಸರು.
ಟ್ರಾಫಿಕ್ ಜಾಮ್ ಸಮಸ್ಯೆ ಯ ನೆಪವೊಡ್ಟಿ ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಸೋಮವಾರದಿಂದ ನಿರ್ಬಂಧ ಹೇರಲಾಗಿದ್ದು , ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸುವಂತಾಗಿದೆ.

ಪೊಳಲಿ ರಾಜರಾಜೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವಕ್ಕೆ ತೆರಳುವ ಭಕ್ತಾದಿಗಳಿಗೆ ಸಂಕಷ್ಟ ನೀಡಿದ ಪೋಲೀಸ್ ಇಲಾಖೆ.
ಹಲವು ವರ್ಷಗಳಿಂದ ಸರ್ವೀಸ್ ರಸ್ತೆಯಲ್ಲಿ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದ್ದು, ಸೋಮವಾರದಿಂದ ಏಕಾಏಕಿ ಬಸ್ ಸಂಚಾರ ಮಾಡದಂತೆ ಬಂಟ್ವಾಳ ಟ್ರಾಫಿಕ್ ಪೋಲೀಸರು ತಡೆಯೊಡ್ಡಿ ನೇರವಾಗಿ ಅರ್ದ ಮೈಲು ದೂರವಿರುವ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಕ್ಕೆ ಖಾಸಗಿ ಹಾಗೂ ಸರಕಾರಿ ಬಸ್ ಗಳನ್ನು ಕಳುಹಿಸಲಾಗುತ್ತಿದೆ.
ದೂರದೂರಿನಿಂದ ಬರುವ ಪ್ರಯಾಣಿಕರಿಗೆ ಯಾವುದೇ ಪೂರ್ವ ಮಾಹಿತಿಯಿಲ್ಲದ ಈ ಪೋಲೀಸರ ನಡೆಯಿಂದ ಸಾಕಷ್ಟು ತೊಂದರೆ ಅನುಭವಿಸದ್ದಾರೆ.
ಉರಿಯುವ ಬಿಸಿಲಿಗೆ ವೃದ್ದರು, ಮಕ್ಕಳನ್ನು ಹಿಡಿದುಕೊಂಡು ತಾಯಂದಿರು ಅತ್ತ ಇತ್ತ ಅಲೆದಾಡುವ ರೀತಿ ನೋಡಿದರೆ ಕಲ್ಲು ಹೃದಯವೂ ಒಮ್ಮೆ ಕರಗುತ್ತದೆ.


ಪೊಳಲಿ ಬ್ರಹ್ಮಕಲಶೋತ್ಸವದ ಈ ಸಂದರ್ಭದಲ್ಲಿ ಊರ ಪರ ಊರ ಭಕ್ತರು ಬಿಸಿರೋಡ್ ಗೆ ಬಂದು ಬಸ್ ಬದಲು ಮಾಡಿ ಹೋಗುವ ಸಂದರ್ಭದಲ್ಲಿ ಇವರಿಗೆ ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಅವರು ದೂರಿಕೊಂಡಿದ್ದಾರೆ.
ಇದು ಪೋಲೀಸರಿಗೆ ಸುಲಭವಾಗಲು ಮಾಡಿದ್ದು ಬಿಟ್ಟರೆ ಪ್ರಯಾಣಿಕರಿಗೆ ಇದರಿಂದ ತೊಂದರೆ ಯಾಗುತ್ತಿದೆ ಎಂದು ಪ್ರಯಾಣಿಕ ನೋರ್ವ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸಾರ್ವಜನಿಕರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಈ ಬಗ್ಗೆ ಮನವಿ ಮಾಡಿಕೊಂಡರು ಸಂಬಂಧಿಸಿದ ಅಧಿಕಾರಿಗಳು ಇದು ಮುಂದಿನ ದಿನಗಳಲ್ಲಿ ಬಿಸಿರೋಡ್ ಬದಲಾವಣೆ ಮಾಡುವ ದೀರ್ಘಕಾಲದ ಚಿಂತನೆ , ಜನ ಹೊಂದಿಕೊಂಡು ಹೋಗಬೇಕು ಎಂದು ಹೇಳಿ ಮೌನವಾಗಿದ್ದಾರೆ.
ಇಂದು ಬಿಸಿರೋಡ್ ಸರ್ವೀಸ್ ರಸ್ತೆಯಲ್ಲಿ ಬ್ಯಾನರ್ ಒಂದನ್ನು ಸಂಚಾರಿ ಪೋಲೀಸ್ ಠಾಣೆ ಹಾಕಿದೆ. ಸರ್ವೀಸ್ ರಸ್ತೆಯಲ್ಲಿ ಬಸ್ ಬರುವುದಿಲ್ಲ , ಕೆ.ಎಸ್.ಆರ್.ಟಿ.ಸಿ.ಬಳಿ ಪ್ರಯಾಣಿಕರು ಹೋಗಬೇಕು ಎಂಬ ಬ್ಯಾನರ್ ಹಾಕಲಾಗಿದೆ.
ಕಳೆದ ಮೂರು ದಿನಗಳಿಂದ ಜನ ಸುತ್ತಾಡಿ ಸುಸ್ತಾಗಿದ್ದಾರೆ.
ತಾಲೂಕು ಪಂಚಾಯತ್ ನಿಂದ ಹಿಡಿದು ಎಲ್ಲಾ ಕಚೇರಿಗಳು ಸರ್ವೀಸ್ ರಸ್ತೆಯಲ್ಲಿ ಹಿಂದೆ ಬಸ್ ನಿಲುಗಡೆಯಾಗುತ್ತಿದ್ದ ಸ್ಥಳ ದಲ್ಲಿ ಇರುವುದರಿಂದ ಜನರಿಗೆ ಅನುಕೂಲವಾಗುತ್ತಿತ್ತು.
ಜನರಿಗೆ ತೊಂದರೆಯಾಗುವ ಈ ಯೋಜನೆ ಯಾಕೆ ಬೇಕು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಯಾದರೆ ಅಲ್ಲಿ ಪೋಲೀಸರ ನೇಮಕಮಾಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಾಗಿತ್ತು ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.
ಒಟ್ಟಿನಲ್ಲಿ ಜನರ ತೊಂದರೆ ಯಾಗುವ ಈ ವ್ಯವಸ್ಥೆ ಗಳನ್ನು ಬದಲಾಯಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...