Saturday, July 12, 2025

ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಪೋಲೀಸರ ನಿರ್ಬಂಧ: ಪೊಳಲಿ ಬ್ರಹ್ಮಕಲಶೋತ್ಸವಕ್ಕೆ ತೆರಳುವ ಭಕ್ತರಿಗೆ ಸಂಕಷ್ಟ

ಬಂಟ್ವಾಳ: ಸರ್ವೀಸ್ ರಸ್ತೆಯಲ್ಲಿ ಸರಕಾರಿ ಖಾಸಗಿ ಬಸ್ ಗಳ ಸಂಚಾರಕ್ಕೆ ನಿರ್ಬಂಧ ಹೇರಿದ ಬಂಟ್ವಾಳ ಪೋಲಿಸರು.
ಟ್ರಾಫಿಕ್ ಜಾಮ್ ಸಮಸ್ಯೆ ಯ ನೆಪವೊಡ್ಟಿ ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಸೋಮವಾರದಿಂದ ನಿರ್ಬಂಧ ಹೇರಲಾಗಿದ್ದು , ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸುವಂತಾಗಿದೆ.

ಪೊಳಲಿ ರಾಜರಾಜೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವಕ್ಕೆ ತೆರಳುವ ಭಕ್ತಾದಿಗಳಿಗೆ ಸಂಕಷ್ಟ ನೀಡಿದ ಪೋಲೀಸ್ ಇಲಾಖೆ.
ಹಲವು ವರ್ಷಗಳಿಂದ ಸರ್ವೀಸ್ ರಸ್ತೆಯಲ್ಲಿ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದ್ದು, ಸೋಮವಾರದಿಂದ ಏಕಾಏಕಿ ಬಸ್ ಸಂಚಾರ ಮಾಡದಂತೆ ಬಂಟ್ವಾಳ ಟ್ರಾಫಿಕ್ ಪೋಲೀಸರು ತಡೆಯೊಡ್ಡಿ ನೇರವಾಗಿ ಅರ್ದ ಮೈಲು ದೂರವಿರುವ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಕ್ಕೆ ಖಾಸಗಿ ಹಾಗೂ ಸರಕಾರಿ ಬಸ್ ಗಳನ್ನು ಕಳುಹಿಸಲಾಗುತ್ತಿದೆ.
ದೂರದೂರಿನಿಂದ ಬರುವ ಪ್ರಯಾಣಿಕರಿಗೆ ಯಾವುದೇ ಪೂರ್ವ ಮಾಹಿತಿಯಿಲ್ಲದ ಈ ಪೋಲೀಸರ ನಡೆಯಿಂದ ಸಾಕಷ್ಟು ತೊಂದರೆ ಅನುಭವಿಸದ್ದಾರೆ.
ಉರಿಯುವ ಬಿಸಿಲಿಗೆ ವೃದ್ದರು, ಮಕ್ಕಳನ್ನು ಹಿಡಿದುಕೊಂಡು ತಾಯಂದಿರು ಅತ್ತ ಇತ್ತ ಅಲೆದಾಡುವ ರೀತಿ ನೋಡಿದರೆ ಕಲ್ಲು ಹೃದಯವೂ ಒಮ್ಮೆ ಕರಗುತ್ತದೆ.


ಪೊಳಲಿ ಬ್ರಹ್ಮಕಲಶೋತ್ಸವದ ಈ ಸಂದರ್ಭದಲ್ಲಿ ಊರ ಪರ ಊರ ಭಕ್ತರು ಬಿಸಿರೋಡ್ ಗೆ ಬಂದು ಬಸ್ ಬದಲು ಮಾಡಿ ಹೋಗುವ ಸಂದರ್ಭದಲ್ಲಿ ಇವರಿಗೆ ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಅವರು ದೂರಿಕೊಂಡಿದ್ದಾರೆ.
ಇದು ಪೋಲೀಸರಿಗೆ ಸುಲಭವಾಗಲು ಮಾಡಿದ್ದು ಬಿಟ್ಟರೆ ಪ್ರಯಾಣಿಕರಿಗೆ ಇದರಿಂದ ತೊಂದರೆ ಯಾಗುತ್ತಿದೆ ಎಂದು ಪ್ರಯಾಣಿಕ ನೋರ್ವ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸಾರ್ವಜನಿಕರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಈ ಬಗ್ಗೆ ಮನವಿ ಮಾಡಿಕೊಂಡರು ಸಂಬಂಧಿಸಿದ ಅಧಿಕಾರಿಗಳು ಇದು ಮುಂದಿನ ದಿನಗಳಲ್ಲಿ ಬಿಸಿರೋಡ್ ಬದಲಾವಣೆ ಮಾಡುವ ದೀರ್ಘಕಾಲದ ಚಿಂತನೆ , ಜನ ಹೊಂದಿಕೊಂಡು ಹೋಗಬೇಕು ಎಂದು ಹೇಳಿ ಮೌನವಾಗಿದ್ದಾರೆ.
ಇಂದು ಬಿಸಿರೋಡ್ ಸರ್ವೀಸ್ ರಸ್ತೆಯಲ್ಲಿ ಬ್ಯಾನರ್ ಒಂದನ್ನು ಸಂಚಾರಿ ಪೋಲೀಸ್ ಠಾಣೆ ಹಾಕಿದೆ. ಸರ್ವೀಸ್ ರಸ್ತೆಯಲ್ಲಿ ಬಸ್ ಬರುವುದಿಲ್ಲ , ಕೆ.ಎಸ್.ಆರ್.ಟಿ.ಸಿ.ಬಳಿ ಪ್ರಯಾಣಿಕರು ಹೋಗಬೇಕು ಎಂಬ ಬ್ಯಾನರ್ ಹಾಕಲಾಗಿದೆ.
ಕಳೆದ ಮೂರು ದಿನಗಳಿಂದ ಜನ ಸುತ್ತಾಡಿ ಸುಸ್ತಾಗಿದ್ದಾರೆ.
ತಾಲೂಕು ಪಂಚಾಯತ್ ನಿಂದ ಹಿಡಿದು ಎಲ್ಲಾ ಕಚೇರಿಗಳು ಸರ್ವೀಸ್ ರಸ್ತೆಯಲ್ಲಿ ಹಿಂದೆ ಬಸ್ ನಿಲುಗಡೆಯಾಗುತ್ತಿದ್ದ ಸ್ಥಳ ದಲ್ಲಿ ಇರುವುದರಿಂದ ಜನರಿಗೆ ಅನುಕೂಲವಾಗುತ್ತಿತ್ತು.
ಜನರಿಗೆ ತೊಂದರೆಯಾಗುವ ಈ ಯೋಜನೆ ಯಾಕೆ ಬೇಕು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಯಾದರೆ ಅಲ್ಲಿ ಪೋಲೀಸರ ನೇಮಕಮಾಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಾಗಿತ್ತು ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.
ಒಟ್ಟಿನಲ್ಲಿ ಜನರ ತೊಂದರೆ ಯಾಗುವ ಈ ವ್ಯವಸ್ಥೆ ಗಳನ್ನು ಬದಲಾಯಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...