Friday, July 4, 2025

ಮಾಣಿಲ ಕುಕ್ಕಾಜೆ ಕ್ಷೇತ್ರದ ವತಿಯಿಂದ ಪುಸ್ತಕ ವಿತರಣೆ

ವಿಟ್ಲ: ಮಾಣಿಲದಂತಹ ಹಳ್ಳಿಯ ಮಣ್ಣಿನ ಪರಿಸರದಲ್ಲಿ ಹುಟ್ಟಿ ಬೆಳೆದ ಮಕ್ಕಳು ಶಿಕ್ಷಣದೊಂದಿಗೆ ಸ್ವಪ್ರಯತ್ನ, ಛಲದ ಮೂಲಕ ಬೆಳೆದು ಈ ಊರಿಗೆ ಕೀರ್ತಿ ತರುವಂತಾಗಬೇಕು. ನಾವು ನೆಡುವ ಗಿಡಗಳು ಮುಂದಕ್ಕೆ ಸಮಾಜಕ್ಕೆ ಬೆಳೆದು ಗಾಳಿ, ನೆರಳು, ಫಲ ನೀಡುವಂತಾಗಬೇಕು ಎಂದು ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಹೇಳಿದರು.
ಅವರು ಶ್ರೀ ಕ್ಷೇತ್ರದ ವತಿಯಿಂದ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ ಪರಿಸರದ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್‍ಯಕ್ರಮದಲ್ಲಿ ಪುಸ್ತಕ ವಿತರಿಸಿ ಆಶೀರ್ವಚನ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ.ಕುಕ್ಕಾಜೆ ವಹಿಸಿದ್ದರು. ಸಮಾರಂಭದಲ್ಲಿ ಕಾಳಿಕಾ ಕಲಾ ಸಂಘದ ಅಧ್ಯಕ್ಷ ಸಂಕಪ್ಪ ಸುವರ್ಣ ಬಾಡೂರು, ಮಹಿಳಾ ಸಂಘದ ಅಧ್ಯಕ್ಷೆ ನಳಿನಾಕ್ಷಿ ಕಾಮಾಜಾಲು, ಗಿರೀಶ್ ಕುಕ್ಕಾಜೆ, ಮನೋಜ್ ತಾರಿದಳ ಉಪಸ್ಥಿತರಿದ್ದರು.
ರವಿ ಎಸ್.ಎಂ. ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು. ದೇವಿಪ್ರಸಾದ್ ಕುಕ್ಕಾಜೆ ವಂದಿಸಿದರು.

More from the blog

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...

ಬೂಡ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ: ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಆಕ್ರೋಶ

ಬಂಟ್ವಾಳ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಆರೋಪಗಳು ಕೇಳಿ ಬಂದಿದ್ದು, ಪ್ರಾಧಿಕಾರದ ವಿರುದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದಲ್ಲಿ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ  : ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಗೆ ಮನವಿ

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಬೇಟಿಯಾಗಿ ಮನವಿ ನೀಡಿದ್ದಾರೆ. ಬಳಿಕ...

ರಸ್ತೆ ಅಭಿವೃದ್ಧಿ ಕಾಮಗಾರಿ – ಜಾಗ ಕಳೆದುಕೊಂಡವರಿಗೆ ಬೆಳ್ತಂಗಡಿಯಲ್ಲಿ ದಾಖಲೆ ಸಂಗ್ರಹ ಶಾಖೆ ಆರಂಭ.. 

ಬೆಳ್ತಂಗಡಿ : ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ರಸ್ತೆಯ ಅಭಿವೃದ್ಧಿ ಕಾಮಗಾರಿ ವೇಳೆ ಬಹುತೇಕ ಸ್ಥಳೀಯರು ಜಾಗ ಕಳೆದುಕೊಂಡಿದ್ದರು. ಇದೀಗ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರ ಮುತುವರ್ಜಿಯಲ್ಲಿ ರಾಷ್ಟ್ರೀಯ...