ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ೫೩ನೇ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಮಂಗಳವಾರ ನಾನಾ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮಾ. 9 ರಂದು ಶ್ರೀಗಣಪತಿ ಹೋಮದ ಬಳಿಕ ಶ್ರೀದೇವಿಯ ಕಲಶ ಪ್ರತಿಷ್ಠೆ ನಡೆದು, ಬಳಿಕ ನಾನಾ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ. ಮಂಗಳವಾರ ಪ್ರಾತಃ ಕಾಳ ಶ್ರೀ ಗಣಪತಿ ಹೋಮ, ಶ್ರೀ ನರಸಿಂಹ ಮಂಡಲ ಪೂಜೆ, ತುಲಾಭಾರ ಸೇವೆ, ಮಹಾಪೂಜೆ ನಡೆಯಿತು. ಆ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯ ಬಲಿ ಉತ್ಸವ, ಪಲ್ಲಕಿ ಉತ್ಸವ ನಡೆಯಿತು. ಶ್ರೀ ದೇವಿಗೆ ಅಲಂಕಾರ ಪೂಜೆ, ಹೂವಿನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಊರಪರವೂರಿನ ಅಪಾರ ಸಂಖ್ಯೆಯ ಭಕ್ತರು ಇದ್ದರು. ಸಂಜೆ ದೀಪಾರಾಧನೆ, ಆಂಜನೇಯ ಸ್ವಾಮಿಯ ಮಹಾಪೂಜೆ ನಡೆಯಿತು.














