Thursday, June 26, 2025

ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಬಂಟ್ವಾಳ ಕುಲಾಲ ವೇದಿಕೆ ಸಹಾಯ

ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ಸಮೀಪ ವಾಸ್ತವ್ಯವಿರುವ.ಬಡ ಗೋವಿಂದ ಮೂಲ್ಯ ಕುಟುಂಬಕ್ಕೆ ನೂತನ ಮನೆ ನಿರ್ಮಾಣಕ್ಕೆ ಬೇಕಾದ ಸಿಮೆಂಟನ್ಒದಗಿಸುವುದೆಂದು ಬಂಟ್ವಾಳ ಕುಲಾಲ ವೇದಿಕೆ ನಿರ್ಧರಿಸಿದಂತೆ ಮನೆಯ ಸ್ಲಾಬ್ ಕೆಲಸದವರೆಗೆ ಕಾಮಗಾರಿ ಪೂರ್ಣವಾಗಿದ್ದು ವೇದಿಕೆ ಸದಸ್ಯರು ಅಲ್ಲಿಗೆ ತೆರಳಿ ವೀಕ್ಷಿಸಿ ಈ ತನಕ ಖರ್ಚಾದ 98 ಚೀಲ ಸಿಮೆಂಟ್ ಬಾಬ್ತು ಎರಡನೇ ಕಂತಿನ ಹಣವನ್ನು ಚೆಕ್ ಮೂಲಕ ಗೋವಿಂದ ಮೂಲ್ಯರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗೋವಿಂದರ ಪತ್ನಿ ಮೀನಾಕ್ಷಿ ಬಂಟ್ವಾಳ ಕುಲಾಲ ವೇದಿಕೆ ಅಧ್ಯಕ್ಷರಾದ ಸುಕುಮಾರ್ ಬಂಟ್ವಾಳ, ಗೌರವಾಧ್ಯಕ್ಷರಾದ ನಾರಾಯಣ ಸಿ ಪೆರ್ನೆ,ಜೊತೆ ಕಾರ್ಯದರ್ಶಿ ಹಾಗೂ ಬಂಟ್ವಾಳ ನಗರ ರೋಟರಿ ಅಧ್ಯಕ್ಷರಾದ ರೊ. ಜಯರಾಜ್ ಬಂಗೇರ ಕ್ರೀಡಾ ಕಾರ್ಯದರ್ಶಿ ಕಾರ್ತಿಕ್ ಮಯ್ಯರಬೈಲ್ ಮತ್ತು ಗೌರವ ಸಲಹೆಗಾರರಾದ ಶೇಷಪ್ಪ ಮಾಸ್ಟರ್ ಜೊತೆಗಿದ್ದರು.*

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...