Friday, February 7, 2025

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಾರ್ಥಿಸುತ್ತೇನೆ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ಕುಂಭಮೇಳದ ತೀರ್ಥ ಸ್ನಾನ ಹಾಗೂ ಅಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತಾಗಿ ನೀಡಿರುವ ಹೇಳಿಕೆ, ಒಬ್ಬ ಭಾರತೀಯನಾಗಿ ನನಗೆ ಅತ್ಯಂತ ನೋವನ್ನುಂಟು ಮಾಡಿದೆ.

ಮೌನಿ ಅಮಾವಾಸ್ಯೆಯ ಹಿಂದಿನ ದಿನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ ಮಾಡುವ ಪುಣ್ಯ ನನಗೆ ಲಭಿಸಿತು. 50 ಕೋಟಿಗೂ ಅಧಿಕ ಭಕ್ತರು ತೀರ್ಥ ಸ್ನಾನ ಮಾಡಲು ಉತ್ತರಪ್ರದೇಶ ಸರಕಾರ ಮಾಡಿರುವ ಅತ್ಯದ್ಭುತ ವ್ಯವಸ್ಥೆಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪೊಲೀಸ್ ಇಲಾಖೆಯಂತು ಸುವ್ಯವಸ್ಥೆಗಾಗಿ ತಮ್ಮನು ಸಂಪೂರ್ಣ ಸಮರ್ಪಿಸಿಕೊಂಡಿದ್ದಾರೆ. ಕೇಂಬ್ರಿಜ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಕುಂಭಮೇಳದ ವ್ಯವಸ್ಥೆ ಒಂದು ಅಧ್ಯಯನದ ವಿಷಯ ಅಂದರೆ ಅದು ಎಷ್ಟು ಉನ್ನತವಾದದ್ದು ಎಂದು ನಾವು ಕಲ್ಪಿಸಿಕೊಳ್ಳಬಹುದು. ನಾನೊಬ್ಬ ಭಾಜಪದ ಕಾರ್ಯಕರ್ತನಾಗಿ ಅಥವಾ ವಿಧಾನಪರಿಷತ್ ಸದಸ್ಯನಾಗಿ ಈ ಮಾತನ್ನು ಹೇಳ್ತಾ ಇಲ್ಲ. ಒಬ್ಬ ಭಾರತೀಯನಾಗಿ ನಾನು ಯೋಗಿ ಆದಿತ್ಯನಾಥ್ ಸರಕಾರದ ಪ್ರಚಂಡ ವ್ಯವಸ್ಥೆಗಾಗಿ ಅವರಿಗೆ ನಾನು ಶತ ನಮನಗಳನ್ನು ಸಲ್ಲಿಸುತ್ತೇನೆ. ನನ್ನ ಮಾತಿನಲ್ಲಿ ನಂಬಿಕೆ ಇಲ್ಲವಾದರೆ ಮಾನ್ಯ ಖರ್ಗೆಯವರು ತಮ್ಮದೇ ಪಕ್ಷದ ಮಾನ್ಯ ಸಭಾಧ್ಯಕ್ಷರಾದ ಖಾದರ್ ಅವರು ಪ್ರಯಾಗ ದರ್ಶನ ಮಾಡಿ ಬಂದಿದ್ದಾರೆ ಅವರನ್ನು ಕೇಳಿಕೊಳ್ಳಬಹುದು.

1954ರಲ್ಲಿ ಇದೇ ಪ್ರಯಾಗದಲ್ಲಿ ಕುಂಭಮೇಳ ನಡೆದಾಗ ಸಾವಿರಾರು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದರು ಎಂದು ವರದಿಗಳು ಸಾಕ್ಷ್ಯ ನುಡಿಯುತ್ತವೆ. ಹಾಗಂತ ಆ ಘಟನೆಗೆ ಆಗಿನ ಪ್ರಧಾನಿ ಜವಾಹರ ಲಾಲ್ ನೆಹರು ಕಾರಣರೆಂದು ನಾವು ಖಂಡಿತವಾಗಿ ಹೇಳೋದಿಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಯಾದರು ದೇಶದ ಪ್ರಜೆಗಳಿಗೆ ಕೇಡಾಗಲಿ ಎಂದು ಬಯಸುವುದಿಲ್ಲ. ಹಾಗಿರುವಾಗ ನಿನ್ನೆ ನಡೆದ ಘಟನೆಗೆ ಸರಕಾರವೇ ಹೊಣೆ ಎಂದು ರಾಜಕೀಯ ಮಾಡುವುದು ಎಷ್ಟು ಸರಿ ಖರ್ಗೆ ಅವರೇ.

ಕುಂಭಮೇಳ ನಮ್ಮ ದೇಶದ ಸಂಸ್ಕೃತಿಯ ಪ್ರತೀಕ. ಒಬ್ಬ ನಿಜವಾದ ಭಾರತೀಯನಾದವನು ಕುಂಭಮೇಳ ಸಂಪೂರ್ಣ ಯಶಸ್ವಿಯಾಗಲಿ ಎಂದೇ ಹಾರೈಸುತ್ತಾನೆ. ತಮಗೂ ಅಂತಹ ಒಳ್ಳೆಯ ಮನಸ್ಸಿದೆ. ಆದರೆ ನಿಮ್ಮೊಳಗಿನ ರಾಜಕೀಯ ಪ್ರೇರಿತ ಮನಸ್ಸು ನಿಮ್ಮನ್ನು ಹಾದಿ ತಪ್ಪಿಸುತ್ತಿದೆ. ನೀವು ಹಿರಿಯರು ದಯವಿಟ್ಟು ನಿಮ್ಮ ಹಿರಿತನಕ್ಕೆ ಭಾರತೀಯರೆಲ್ಲರೂ ಗೌರವ ಕೊಡುವಂತೆ ನಡೆದುಕೊಳ್ಳಿ ಎಂದು ತಿಳಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ, ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

  ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ...

ಮಾಣಿಯಲ್ಲಿ ಟ್ರಾಫಿಕ್ ಜಾಮ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ರಸ್ತೆಯ ಮಧ್ಯೆ ಮಾಣಿಯಲ್ಲಿ ಇಂದು ಮಧ್ಯಾಹ್ನ ವೇಳೆ ಸುಮಾರು ತಾಸುಗಳ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿರುವ ಘಟನೆ ನಡೆದಿದ್ದು, ಪ್ರಯಾಣಿಕರು ತೊಂದರೆಯಲ್ಲಿ ಸಿಲುಕಿದ...