Sunday, February 9, 2025

ಕುಂಭಶೀ ಆಂಗ್ಲ ಮಾಧ್ಯಮ ವಸತಿ ಶಾಲೆ- ಶಿಕ್ಷಕ-ರಕ್ಷಕ ಸಂಘದ ಸಭೆ

ನಿಟ್ಟಡೆ:-ಕುಂಭಶೀ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ ನಡೆಯಿತು.

ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಮಾತನಾಡಿ, ಒಂದು ವಿದ್ಯಾ ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳೆಯಬೇಕಾದರೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಮತ್ತು ಶಾಲಾ ಮುಖ್ಯಸ್ಥರು ಆಧಾರ ಸ್ತಂಭಗಳಾಗಿರುತ್ತಾರೆ. ಒಂದು ಮಗು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಬೇಕಾದರೆ ಶಿಕ್ಷಣದ ಜೊತೆಗೆ ಶಿಸ್ತು ನಡತೆ ಅತೀ ಮುಖ್ಯ ಎಂದು ಹೇಳಿದರು.

ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಗಿರೀಶ್ ಕೆ.ಹೆಚ್. ವಹಿಸಿ ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು, ಪ್ರೀತಿಯಿಂದ ಎಲ್ಲವನ್ನು ಗೆಲ್ಲಬಹುದು. ಶಾಲೆಯ ಏಳಿಗೆಗೆ ಪೋಷಕರ ಸಹಕಾರ ಅತೀ ಮುಖ್ಯ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ರಕ್ಷಿತ್ ಕುಲಾಲ್ ಬಿ.ಇ. ಅವರು ಎಸ್.ಎಸ್.ಎಲ್.ಸಿ. ನಂತರದ ಶಿಕ್ಷಣ ಆಯ್ಕೆಯು ಬಹಳ ಮುಖ್ಯ ಎಂದು ಹೇಳಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಮಕ್ಕಳ ಶೈಕ್ಷಣಿಕ ಪ್ರಗತಿ, ಸ್ವಚ್ಚತೆ ಬಗ್ಗೆ ಗಮನಹರಿಸಿ ಎಂಬ ಕಿವಿಮಾತು ಪೋಷಕರಿಗೆ ತಿಳಿಸಿದರು.

ಸಹ ಶಿಕ್ಷಕಿಯರಾದ ಬಬಿತಾ ಮತ್ತು ಸವಿತಾ ಪ್ರಾರ್ಥಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಉಷಾ ಜಿ. ಸ್ವಾಗತಿಸಿ, ಸಹಶಿಕ್ಷಕಿ ಅಪರ್ಣ ಹಾಗೂ ಸರೋಜ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಧಾ ವಂದಿಸಿದರು.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...