ನಿಟ್ಟಡೆ:-ಕುಂಭಶೀ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ ನಡೆಯಿತು.


ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಮಾತನಾಡಿ, ಒಂದು ವಿದ್ಯಾ ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳೆಯಬೇಕಾದರೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಮತ್ತು ಶಾಲಾ ಮುಖ್ಯಸ್ಥರು ಆಧಾರ ಸ್ತಂಭಗಳಾಗಿರುತ್ತಾರೆ. ಒಂದು ಮಗು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಬೇಕಾದರೆ ಶಿಕ್ಷಣದ ಜೊತೆಗೆ ಶಿಸ್ತು ನಡತೆ ಅತೀ ಮುಖ್ಯ ಎಂದು ಹೇಳಿದರು.
ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಗಿರೀಶ್ ಕೆ.ಹೆಚ್. ವಹಿಸಿ ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು, ಪ್ರೀತಿಯಿಂದ ಎಲ್ಲವನ್ನು ಗೆಲ್ಲಬಹುದು. ಶಾಲೆಯ ಏಳಿಗೆಗೆ ಪೋಷಕರ ಸಹಕಾರ ಅತೀ ಮುಖ್ಯ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ರಕ್ಷಿತ್ ಕುಲಾಲ್ ಬಿ.ಇ. ಅವರು ಎಸ್.ಎಸ್.ಎಲ್.ಸಿ. ನಂತರದ ಶಿಕ್ಷಣ ಆಯ್ಕೆಯು ಬಹಳ ಮುಖ್ಯ ಎಂದು ಹೇಳಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಮಕ್ಕಳ ಶೈಕ್ಷಣಿಕ ಪ್ರಗತಿ, ಸ್ವಚ್ಚತೆ ಬಗ್ಗೆ ಗಮನಹರಿಸಿ ಎಂಬ ಕಿವಿಮಾತು ಪೋಷಕರಿಗೆ ತಿಳಿಸಿದರು.
ಸಹ ಶಿಕ್ಷಕಿಯರಾದ ಬಬಿತಾ ಮತ್ತು ಸವಿತಾ ಪ್ರಾರ್ಥಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಉಷಾ ಜಿ. ಸ್ವಾಗತಿಸಿ, ಸಹಶಿಕ್ಷಕಿ ಅಪರ್ಣ ಹಾಗೂ ಸರೋಜ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಧಾ ವಂದಿಸಿದರು.