ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ/ಕಾಲೇಜು ವೇಣೂರಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೂಡುಗೆ ಸಮಾರಂಭ ನಡೆಯಿತು.

ಬೆಳ್ತಂಗಡಿ ತಾಲೂಕು ಆಫೀಸ್ ಕಂದಾಯ ನಿರೀಕ್ಷಕ ಪವಾಡಪ್ಪ ದೊಡಮನಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಎಸ್.ಎಸ್.ಎಲ್.ಸಿ ಶಿಕ್ಷಣ ಅತೀ ಮುಖ್ಯ. ಶಿಸ್ತು,ನಡತೆ ನಿಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿದರು.
ಶಾಲಾ ಸಂಚಾಲಕ ಗಿರೀಶ್ ಕೆ.ಹೆಚ್. ಹಾಗೂ ಇತರ ಅಧ್ಯಾಪಕ ವೃಂದದವರು ವಿದ್ಯಾರ್ಥಿಗಳಿಗೆ ಪರೀಕ್ಷೆ ತಯಾರಿಯ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ರಕ್ಷಿತ್ ಕುಲಾಲ್ ಬಿ.ಇ., ಪ್ರೌಡಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ., ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಉಪಸ್ಥಿತರಿದ್ದರು.
9ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. 9ನೇ ತರಗತಿ ವಿದ್ಯಾರ್ಥಿಗಳಾದ ಆಕಾಶ್ ಸ್ವಾಗತಿಸಿ, ಅನಘ ಭಟ್ ವಂದಿಸಿದರು. ಮಾನ್ಯತ ಮತ್ತು ಪ್ರಜೀತ್ ಹೆಬ್ಬಾರ್ ನಿರೂಪಿಸಿದರು.