Monday, January 26, 2026

’ಹಿಂದುಗಳಲ್ಲಿ ಗಟ್ಟಿತನದ ಸಂಘಟನೆ ಇದ್ದಾಗ ಯಾವ ರೀತಿಯ ಮತಾಂತರಗಳಾಗಲು ಸಾಧ್ಯವಿಲ್ಲ’ – ಡಾ. ವಿಶ್ವಸಂತೋಷ ಗುರೂಜಿ

ವಿಟ್ಲ: ಆರೋಗ್ಯ ಎಲ್ಲಾ ಸಂಪತ್ತುಗಳಿಂದ ಶ್ರೇಷ್ಟವಾಗಿರುವಂತಹದ್ದಾಗಿದೆ. ನಿಷ್ಕಪಟ ಪ್ರೀತಿಯಿಂದ ಮಾತ್ರ ದೇವರನ್ನು ಒಲಿಸಿಕೊಳ್ಳಬಹುದು. ಹಿಂದುಗಳಲ್ಲಿ ಗಟ್ಟಿತನದ ಸಂಘಟನೆ ಇದ್ದಾಗ ಯಾವ ರೀತಿಯ ಮತಾಂತರಗಳಾಗಲು ಸಾಧ್ಯವಿಲ್ಲ ಎಂದು ಬಾರ್ಕೂರು ಭಾರ್ಗವ ಬೀಡು ಬಾರ್ಕೂರು ಮಹಾಸಂಸ್ಥಾನದ ವಿದ್ಯಾವಾಚಸ್ಪತಿ ಡಾ.ವಿಶ್ವಸಂತೋಷ ಭಾರತಿ ಶ್ರೀಪಾದರು ಹೇಳಿದರು.
ಅವರು ಗುರುವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ದೇವರು ಮತ್ತು ಆರೋಗ್ಯ-ಆಯುರ್ವೇದ ವಿಚಾರದ ಕುರಿತು ಧಾರ್‍ಮಿಕ ಉಪನ್ಯಾಸ ನೀಡಿದರು. ಹಿಂದು ಎನಿಸಿದವರು ಜಾತಿ ನೋಡದೇ ಒಗ್ಗಟಿನಿಂದಿರುವ ಕಾರ್‍ಯವಾಗಬೇಕು. ಹಿಂದೂ ಧರ್ಮದಲ್ಲಿ ಧರ್ಮ ಬಿಟ್ಟು ಹೋಗಿಲ್ಲ ಎಂಬುದಕ್ಕೆ ಕುಂಡಡ್ಕದಲ್ಲಿ ಆಗಿರುವ ಕೆಲಸಗಳು ಸಾಕ್ಷಿಯಾಗಿದೆ ಎಂದರು.
ವರ್ಕಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಮುಗ್ಧತೆ ನಿಸ್ವಾರ್ಥ ಸೇವೆ ಇದ್ದಲ್ಲಿ ಭಗವಂತನ ಅನುಗ್ರಹವಿರುತ್ತದೆ. ನಮ್ಮೊಳಗಿನ ಪರಮಾತ್ಮನ ಜಾಗೃತಿಯಾಗಲು ದೇವಾಲಯಗಳು ಅಗತ್ಯ. ದೇವಾಲಯದಲ್ಲಿ ಧಾರ್ಮಿಕ ಚಟುವಟಿಕೆಗಳು ನಿರಂತರವಾಗಿ ನಡೆದಾಗ ಶಕ್ತಿ ವೃದ್ಧಿಯಾಗುತ್ತದೆ. ಸನಾತನ ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರನ್ನು ಒಂದಾಗಿಸುವ ಕಾರ್ಯ ಕೇಂದ್ರಗಳಿಂದ ನಡೆಯಬೇಕು. ಜನರಲ್ಲಿ ಶ್ರದ್ಧಾ ಕೇಂದ್ರಗಳ ಬಗೆಗಿನ ಜಾಗೃತಿಯಾಗಬೇಕಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸೈನ್ಯದಲ್ಲಿ ಸೇವೆ ಸಲ್ಲಿಸಿದ ದಯಾನಂದಗೌಡ, ಕೊರಗಪ್ಪಶೆಟ್ಟಿ ಜೇಡರಕೋಡಿ, ಬೊಳಿಗದ್ದೆ ಕೂಸಪ್ಪ ಶೆಟ್ಟಿ, ಕ್ರೀಡಾಕ್ಷೇತ್ರದ ಪ್ರತಿಭೆ ದೀಕ್ಷಿತ್ ಶೆಟ್ಟಿ ಅಬೀರಿ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಬಂಗಾಡಿ ಅರಮನೆಯ ರವಿರಾಜ ಬಲ್ಲಾಳರು ವಹಿಸಿದ್ದರು.
ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಕೆ. ಅನಂತ ಪದ್ಮನಾಭ ಅಸ್ರಣ್ಣರು, ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಲಕುಮಿ ತಂಡದ ಕಿಶೋರ್ ಡಿ.ಶೆಟ್ಟಿ, ಸುಬ್ರಾಯ ಪೈ ವಿಟ್ಲ, ಯುವವಾಹಿನಿ ಕೇಂದ್ರ ಘಟಕದ ಅಧ್ಯಕ್ಷ ಜಯಂತ ನಡುಬೈಲು, ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷ ಎಂ.ಜಯರಾಮ ಶೆಡ್ಟಿಗಾರ್, ಉದ್ಯಮಿ ಕೃಷ್ಣಪ್ಪ ಪೂಜಾರಿ, ಮೆಸ್ಕಾಂ ಎ.ಇ. ಚಂದ್ರಶೇಖರ ಕುಳಾಲು, ವಿನಾಯಕ ನಗರ ಗೌರೀಗಣೇಶ ಸೇವಾ ಸಂಘದ ಪ್ರಧಾನ ಕಾರ್‍ಯದರ್ಶಿ ಸತೀಶ್ ಪೂಜಾರಿ ನೇರೋಳ್ತಡ್ಕ, ಕೆ. ಟಿ. ವೆಂಕಟೇಶ್ವರ ಕರ್ಗಲ್ಲು ನೂಜಿ, ಯೋಗೀಶ ಕುಡ್ವ ಕುಂಡಡ್ಕ ಉಪಸ್ಥಿತರಿದ್ದರು.

ವೇದಿಕೆ ಸಮಿತಿ ಪ್ರಮುಖರಾದ ಶ್ರೀಮಂದರ ಜೈನ್ ಸ್ವಾಗತಿಸಿದರು. ಜಿನ್ನಪ್ಪ ಗೌಡ ಪೆಲತ್ತಿಂಜ ಪ್ರಸ್ತಾಪನೆಗೈದರು. ಚಿದಾನಂದಪೆಲತ್ತಿಂಜ, ಶ್ರೀಪತಿ ನಾಯಕ್., ಅಶ್ವಿನಿ ಕುಂಡಡ್ಕ ಗೌರವಾರ್ಪಣೆ ನಡೆಸಿದರು. ಪದ್ಮನಾಭ ಚಪಡಿಯಡ್ಕ ವಂದಿಸಿದರು. ಕೃಷ್ಣಕಿಶೋರ್ ಕಾರ್‍ಯಕ್ರಮ ನಿರೂಪಿಸಿದರು.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...