Tuesday, February 11, 2025

’ಧರ್ಮವನ್ನು ಉಳಿಸುವಾತನೇ ನಿಜ ಅರ್ಥದ ಅರಸ’- ರಾಘವೇಶ್ವರ ಶ್ರೀ ಕುಂಡಡ್ಕದಲ್ಲಿ ರಾಜ ದರ್ಬಾರ್ ವೈಭವ

ವಿಟ್ಲ: ದೇವರು ಸರ್ವ ಬ್ರಹ್ಮಾಂಡವನ್ನು ಆಳುವ ಅರಸು ಆಗಿದ್ದಾರೆ. ಧರ್ಮವನ್ನು ಉಳಿಸುವಾತನೇ ನಿಜ ಅರ್ಥದ ಅರಸನಾಗಿರುತ್ತಾನೆ. ಧರ್ಮ ಉಳಿದರೆ ಎಲ್ಲವೂ ಉಳಿಯುತ್ತದೆ. ದೇವರು, ಗುರು, ರಾಜರು ಆಸೀನರಾದ ವರ್ತಮಾನ ಕಾಲದ ಅತ್ಯಂತ ವಿಶೇಷ ಸಭೆಯಾಗಿದೆ. ರಾಜದರ್ಬಾರ್ ಮೂಲಕ ಗತ ವೈಭವ ಸ್ಥಿತ ವೈಭವಕ್ಕೆ ಬಂದಿದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಶ್ರೀ ಸಂಸ್ಥಾನ ಗೋಕರ್ಣದ ಶ್ರೀರಾಘವೇಶ್ವರ ಭಾರತಿ ಮಹಾಸ್ವಾಮಿಗಳವರು ನುಡಿದರು.
ವಿಟ್ಲ ಸಮೀಪದ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶಿಬರಿಕಲ್ಲಮಾಡ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ’ರಾಜ ದರ್ಬಾರ್’ ಸಭೆಯಲ್ಲಿ ಆಶೀರ್ವಚನ ನೀಡಿದರು.
ಮಠ ಮತ್ತು ಅರಮನೆಗೆ ಅವಿನಾಭಾವ ಸಂಬಂಧವಿರುತ್ತದೆ. ಎರಡು ಗ್ರಾಮದ ಭಕ್ತರ ತ್ಯಾಗ ಸಮರ್ಪಣೆಯ ಮೂಲಕ ಕುಂಡಡ್ಕದಲ್ಲಿ ದೇಗುಲ, ಸಮೀಪದಲ್ಲಿ ದೈವಸ್ಥಾನ ಪುನರ್ ನಿರ್‍ಮಾಣಗೊಂಡು ಪುನರ್ ಪ್ರತಿಷ್ಠೆಯ ಪುಣ್ಯ ಕಾರ್‍ಯ ನಡೆದಿದ್ದು, ಇತರ ಗ್ರಾಮಗಳ ಭಕ್ತರಿಗೆ ಮಾದರಿಯಾಗಿದೆ ಎಂದು ತಿಳಿಸಿದರು.
ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೋ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಬಾಳೆಕೋಡಿ ಶ್ರೀಕಾಶೀಕಾಲಭೈರವೇಶ್ವರ ಕ್ಷೇತ್ರದ ಡಾ. ಶ್ರೀ ಶಶೀಕಾಂತಮಣಿ ಸ್ವಾಮೀಜಿ ಉಪಸ್ಥಿತರಿದ್ದರು.
ವಿಟ್ಲ ಅರಮನೆಯ ವಿ. ಜನಾರ್ದನ ವರ್ಮ ಅರಸರು ರಾಜ ದರ್ಬಾರ್‌ನ ಅಧ್ಯಕ್ಷತೆಯನ್ನು ವಹಿಸಿದ್ದರು.
ಇತಿಹಾಸ ತಜ್ಞ ಪುಂಡಿಕಾ ಗಣಪತಿ ಭಟ್ ವಿಟ್ಲ ಅರಸರ ಇತಿಹಾಸದ ಬಗ್ಗೆ ಉಪನ್ಯಾಸ ನೀಡಿದರು. ರಾಜ ದರ್ಬಾರ್‌ನಲ್ಲಿ ಪುರೋಹಿತ ವರ್ಗ, ಸಂಗೀತ, ನೃತ್ಯ , ವಾದನ, ಯಕ್ಷಗಾನ ಕಲಾವಿದರ ಮೂಲಕ ಅಷ್ಟವಧಾನ ಸೇವೆ ನಡೆಯಿತು.
ಪದ್ಮಯ್ಯ ಗೌಡ ಪೈಸಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾರಾಯಣ ಪೂಜಾರಿ ವಂದಿಸಿದರು. ನಾಗೇಶ್, ಚಿದಾನಂದ ಗೌಡ ಪೆಲತ್ತಿಂಜ ಸಹಕರಿಸಿದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...