Thursday, June 26, 2025

ಕುಂಡಡ್ಕ ಶ್ರೀ ವಿಷ್ಣುಮೂರ್ತಿ,ಶ್ರೀ ಗಣಪತಿ, ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಗಂಟೆ 6 ಕ್ಕೆ ಶ್ರೀ ಗಣಪತಿ ಹವನ, ಅಂಕುರ ಪೂಜೆ. ಶಯ್ಯಾಮಂಟಪದಲ್ಲಿ ಶ್ರೀ ದೇವರುಗಳಿಗೆ ಬೆಳಗ್ಗಿನ ಪೂಜೆ, ಸಾಮೂಹಿಕ ಪ್ರಾರ್ಥನೆ, ನವಗ್ರಹಾದಿದಶದಾನಗಳು ನಡೆದ ಬಳಿಕ ವೇ.ಮೂ. ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ, ವೇ.ಮೂ.ಗುರುರಾಜ ತಂತ್ರಿಯವರ ಉಪಸ್ಥಿತಿಯಲ್ಲಿ ಬೆಳಗ್ಗೆ ಗಂಟೆ 8..52ರ ಮೀನಲಗ್ನ ಸುಮುಹೂರ್ತಕ್ಕೆ ಶ್ರೀ ಗಣಪತಿ, ಶ್ರೀ ಶಾಸ್ತಾರ ಸಹಿತ ಶ್ರೀ ವಿಷ್ಣುಮೂರ್ತಿದೇವರ ಪುನಃ ಪತಿಷ್ಠೆ, ಗೋದರ್ಶನ, ಅಷ್ಟಮಂಗಲದರ್ಶನ. ಶಿಖರ ಪ್ರತಿಷ್ಠೆ ನಡೆಯಿತು.
ಆ ಬಳಿಕ ಕುಂಭೇಶ ಕರ್ಕರೀಕಲಶಾಭಿಷೇಕ, ನಿದ್ರಾಕಲಶಾಭಿಷೇಕ, ಜೀವಕಲಶಾಭಿಷೇಕ, ಜೀವಾವಾಹನೆ, ಮಂತ್ರಾವಾಹನೆ, ಅವಸ್ಥಾವಾಹನೆ, ಮಂತ್ರನ್ಯಾಸಾದಿಕ್ರಿಯೆಗಳು, ಅಷ್ಟಬಂಧ ಪ್ರತಿಷ್ಠೆ, ಪ್ರತಿಷ್ಠಾಬಲಿ ಅಲಂಕಾರಪೂಜೆ, ಮಹಾಪೂಜೆ, ಪ್ರಸಾದವಿತರಣೆ ನಡೆಯಿತು.
ಸಂಜೆ 6.30 ಗಂಟೆಗೆ ಅಂಕುರಪೂಜೆ ರಾತ್ರಿ 9 ಗಂಟೆಗೆ ಭದ್ರದೀಪ ಪ್ರತಿಷ್ಠೆ, ನಿತ್ಯನೈಮಿತ್ತಿಕಾದಿಗಳ ಪ್ರಮಾಣೀಕರಣ, ರಾತ್ರಿಸೋಪಾನದಳಲ್ಲಿ ಪೂಜೆ, ಕವಾಟಬಂಧನ ನಡೆಯಿತು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...