Tuesday, February 11, 2025

ಕುಂಡಡ್ಕ ಶ್ರೀ ವಿಷ್ಣುಮೂರ್ತಿ,ಶ್ರೀ ಗಣಪತಿ, ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಗಂಟೆ 6 ಕ್ಕೆ ಶ್ರೀ ಗಣಪತಿ ಹವನ, ಅಂಕುರ ಪೂಜೆ. ಶಯ್ಯಾಮಂಟಪದಲ್ಲಿ ಶ್ರೀ ದೇವರುಗಳಿಗೆ ಬೆಳಗ್ಗಿನ ಪೂಜೆ, ಸಾಮೂಹಿಕ ಪ್ರಾರ್ಥನೆ, ನವಗ್ರಹಾದಿದಶದಾನಗಳು ನಡೆದ ಬಳಿಕ ವೇ.ಮೂ. ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ, ವೇ.ಮೂ.ಗುರುರಾಜ ತಂತ್ರಿಯವರ ಉಪಸ್ಥಿತಿಯಲ್ಲಿ ಬೆಳಗ್ಗೆ ಗಂಟೆ 8..52ರ ಮೀನಲಗ್ನ ಸುಮುಹೂರ್ತಕ್ಕೆ ಶ್ರೀ ಗಣಪತಿ, ಶ್ರೀ ಶಾಸ್ತಾರ ಸಹಿತ ಶ್ರೀ ವಿಷ್ಣುಮೂರ್ತಿದೇವರ ಪುನಃ ಪತಿಷ್ಠೆ, ಗೋದರ್ಶನ, ಅಷ್ಟಮಂಗಲದರ್ಶನ. ಶಿಖರ ಪ್ರತಿಷ್ಠೆ ನಡೆಯಿತು.
ಆ ಬಳಿಕ ಕುಂಭೇಶ ಕರ್ಕರೀಕಲಶಾಭಿಷೇಕ, ನಿದ್ರಾಕಲಶಾಭಿಷೇಕ, ಜೀವಕಲಶಾಭಿಷೇಕ, ಜೀವಾವಾಹನೆ, ಮಂತ್ರಾವಾಹನೆ, ಅವಸ್ಥಾವಾಹನೆ, ಮಂತ್ರನ್ಯಾಸಾದಿಕ್ರಿಯೆಗಳು, ಅಷ್ಟಬಂಧ ಪ್ರತಿಷ್ಠೆ, ಪ್ರತಿಷ್ಠಾಬಲಿ ಅಲಂಕಾರಪೂಜೆ, ಮಹಾಪೂಜೆ, ಪ್ರಸಾದವಿತರಣೆ ನಡೆಯಿತು.
ಸಂಜೆ 6.30 ಗಂಟೆಗೆ ಅಂಕುರಪೂಜೆ ರಾತ್ರಿ 9 ಗಂಟೆಗೆ ಭದ್ರದೀಪ ಪ್ರತಿಷ್ಠೆ, ನಿತ್ಯನೈಮಿತ್ತಿಕಾದಿಗಳ ಪ್ರಮಾಣೀಕರಣ, ರಾತ್ರಿಸೋಪಾನದಳಲ್ಲಿ ಪೂಜೆ, ಕವಾಟಬಂಧನ ನಡೆಯಿತು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...