Monday, January 26, 2026

ಕುಂಡಡ್ಕ ಶ್ರೀ ವಿಷ್ಣುಮೂರ್ತಿ,ಶ್ರೀ ಗಣಪತಿ, ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಗಂಟೆ 6 ಕ್ಕೆ ಶ್ರೀ ಗಣಪತಿ ಹವನ, ಅಂಕುರ ಪೂಜೆ. ಶಯ್ಯಾಮಂಟಪದಲ್ಲಿ ಶ್ರೀ ದೇವರುಗಳಿಗೆ ಬೆಳಗ್ಗಿನ ಪೂಜೆ, ಸಾಮೂಹಿಕ ಪ್ರಾರ್ಥನೆ, ನವಗ್ರಹಾದಿದಶದಾನಗಳು ನಡೆದ ಬಳಿಕ ವೇ.ಮೂ. ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ, ವೇ.ಮೂ.ಗುರುರಾಜ ತಂತ್ರಿಯವರ ಉಪಸ್ಥಿತಿಯಲ್ಲಿ ಬೆಳಗ್ಗೆ ಗಂಟೆ 8..52ರ ಮೀನಲಗ್ನ ಸುಮುಹೂರ್ತಕ್ಕೆ ಶ್ರೀ ಗಣಪತಿ, ಶ್ರೀ ಶಾಸ್ತಾರ ಸಹಿತ ಶ್ರೀ ವಿಷ್ಣುಮೂರ್ತಿದೇವರ ಪುನಃ ಪತಿಷ್ಠೆ, ಗೋದರ್ಶನ, ಅಷ್ಟಮಂಗಲದರ್ಶನ. ಶಿಖರ ಪ್ರತಿಷ್ಠೆ ನಡೆಯಿತು.
ಆ ಬಳಿಕ ಕುಂಭೇಶ ಕರ್ಕರೀಕಲಶಾಭಿಷೇಕ, ನಿದ್ರಾಕಲಶಾಭಿಷೇಕ, ಜೀವಕಲಶಾಭಿಷೇಕ, ಜೀವಾವಾಹನೆ, ಮಂತ್ರಾವಾಹನೆ, ಅವಸ್ಥಾವಾಹನೆ, ಮಂತ್ರನ್ಯಾಸಾದಿಕ್ರಿಯೆಗಳು, ಅಷ್ಟಬಂಧ ಪ್ರತಿಷ್ಠೆ, ಪ್ರತಿಷ್ಠಾಬಲಿ ಅಲಂಕಾರಪೂಜೆ, ಮಹಾಪೂಜೆ, ಪ್ರಸಾದವಿತರಣೆ ನಡೆಯಿತು.
ಸಂಜೆ 6.30 ಗಂಟೆಗೆ ಅಂಕುರಪೂಜೆ ರಾತ್ರಿ 9 ಗಂಟೆಗೆ ಭದ್ರದೀಪ ಪ್ರತಿಷ್ಠೆ, ನಿತ್ಯನೈಮಿತ್ತಿಕಾದಿಗಳ ಪ್ರಮಾಣೀಕರಣ, ರಾತ್ರಿಸೋಪಾನದಳಲ್ಲಿ ಪೂಜೆ, ಕವಾಟಬಂಧನ ನಡೆಯಿತು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...