ವಿಟ್ಲ : ಕುಳ, ವಿಟ್ಲಮುಡ್ನೂರು ಗ್ರಾಮಗಳ ಕುಂಡಡ್ಕ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಬ್ರಹ್ಮಕಲಶದ ಬಳಿಕ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಭಾನುವಾರ ಕುಂಭ ಮೇಳದಲ್ಲಿ ಭಾಗವಹಿಸುವ ಮುನ್ನ ಕೇರಳದತ್ತ ಸಾಗುತ್ತಿದ್ದ ನಾಗಸಾಧುಗಳು ಮಾರ್ಗ ಮಧ್ಯೆ ಕುಂಡಡ್ಕ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಆಗಮಿಸಿ, ವಿಶ್ರಾಂತಿ ಪಡೆದರು. ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಕೆ.ಟಿ.ವೆಂಕಟೇಶ್ವರ ನೂಜಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ ಮರುವಾಳ, ಕೋಶಾಧಿಕಾರಿ ಗೋವಿಂದರಾಜ್ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.

