Wednesday, February 12, 2025

ಕುಂಡಡ್ಕ ಬ್ರಹ್ಮಕಲಶೋತ್ಸವದಲ್ಲಿ ರಾಜ ದರ್ಬಾರ್: ಸಮಾಲೋಚನಾ ಸಭೆ

ವಿಟ್ಲ: ಕುಂಡಡ್ಕ ಪಿಲಿಪ್ಪೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹಾಗೂ ಶಿಬರಿಕಲ್ಲು ಮಾಡ ಶ್ರೀ ಮಲರಾಯ ಹಾಗೂ ಮೂವರು ದೈವಂಗಳ ದೈವಸ್ಥಾನದಲ್ಲಿ ಫೆ. 5 ರಿಂದ 23 ರ ತನಕ ನಡೆಯುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಫೆ.10 ರಂದು ವಿಶೇಷವಾಗಿ ನಡೆಯುವ ರಾಜ ದರ್ಬಾರ್ ಕಾರ್‍ಯಕ್ರಮದ ಬಗ್ಗೆ ಶನಿವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಟಿ. ವೆಂಕಟೇಶ್ವರ ನೂಜಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.
ಅರಸೊತ್ತಿಗೆಯ ಕಾಲಘಟ್ಟದಲ್ಲಿ ಮಾತ್ರ ಅರಮನೆಯಲ್ಲಿ ನಡೆಯುತ್ತಿದ್ದ ರಾಜ ದರ್ಬಾರ್ ಇತಿಹಾಸವಾಗಿದ್ದು, ಅದರ ವೈಭವವನ್ನು, ಸ್ವರೂಪವನ್ನು ನೆನಪಿಸುವ ಸಲುವಾಗಿ ಈ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರಸರು ನಡೆಸುತ್ತಿದ್ದ ದರ್ಬಾರನ್ನು ಈ ಕಾಲದ ಜನರಿಗೆ ತೋರಿಸುವ ಪ್ರಯತ್ನವಾಗಿ ಈ ಕಾರ್‍ಯಕ್ರಮ ನಡೆಸಲಾಗುತ್ತಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಗಳಿಗೆ ಸೀಮೆಯ ಪ್ರತಿಯೊಬ್ಬ ಭಕ್ತರು ಸಹಕರಿಸಬೇಕೆಂದು ತಿಳಿಸಿದರು. ದರ್ಬಾರಿನ ಪರಿಕಲ್ಪನೆಯ ರೂಪುರೇಷೆಗಳನ್ನು ವಿವರಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಸೀಮೆಯ ಧಾರ್‍ಮಿಕ ಶ್ರದ್ಧಾಳು, ಹಿರಿಯರಲ್ಲಿ, ಗುತ್ತಿನ ಮನೆಯವರ ಅಭಿಪ್ರಾಯಗಳನ್ನು ಕೇಳಲಾಯಿತು.
ಸಭೆಯಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ಕೆ, ಜಯರಾಮ ಬಲ್ಲಾಳ್, ಶ್ರೀಕಂಠವರ್ಮ, ಸೀಮೆ ಗುರಿಕ್ಕಾರ ನೆಡ್ಲೆ ಈಶ್ವರ ಭಟ್, ವಿಷ್ಣು ಭಟ್ ಅಡ್ಯೇಯಿ ಪಾದೆಕಲ್ಲು, ಶ್ರೀನಿವಾಸ ರೈ ಕುಂಡಕೋಳಿ, ಮುಳಿಯಗುತ್ತು ಸಂಕಪ್ಪ ಶೇಖ, ಪಡಾರಗುತ್ತು ಭುಜಂಗ ರೈ, ಬಾಲಕೃಷ್ಣ ರೈ ಬೆಂಗ್ರೋಡಿ, ಸದಾಶಿವ ಆಚಾರ್‍ಯಕೆ., ಡಾ. ಗೀತಪ್ರಕಾಶ್ ವಿಟ್ಲ, ಸುಬ್ರಹ್ಮಣ್ಯ ಭಟ್ ದೇರಾಜೆ, ಶೇಖರ್ ಭಟ್ ಪಡಾರು, ಪ್ರಭಾಕರ ಶೆಟ್ಟಿ ದಂಬೆಕಾನ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಜಗತ್ಸಾಂತಪಾ ಅಳಿಕೆ, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಗೋವಿಂದ ರಾಜ್ ಪೆರುವಾಜೆ, ಸಂಘಟನಾ ಕಾರ್‍ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ಸಹ ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ, ಪ್ರಚಾರ ಸಮಿತಿಯ ಉಮೇಶ್ ಮಿತ್ತಡ್ಕ ಇನ್ನಿತರು ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...