Friday, June 27, 2025

ಕುಂಡಡ್ಕ ಬ್ರಹ್ಮಕಲಶೋತ್ಸವದಲ್ಲಿ ರಾಜ ದರ್ಬಾರ್: ಸಮಾಲೋಚನಾ ಸಭೆ

ವಿಟ್ಲ: ಕುಂಡಡ್ಕ ಪಿಲಿಪ್ಪೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹಾಗೂ ಶಿಬರಿಕಲ್ಲು ಮಾಡ ಶ್ರೀ ಮಲರಾಯ ಹಾಗೂ ಮೂವರು ದೈವಂಗಳ ದೈವಸ್ಥಾನದಲ್ಲಿ ಫೆ. 5 ರಿಂದ 23 ರ ತನಕ ನಡೆಯುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಫೆ.10 ರಂದು ವಿಶೇಷವಾಗಿ ನಡೆಯುವ ರಾಜ ದರ್ಬಾರ್ ಕಾರ್‍ಯಕ್ರಮದ ಬಗ್ಗೆ ಶನಿವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಟಿ. ವೆಂಕಟೇಶ್ವರ ನೂಜಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.
ಅರಸೊತ್ತಿಗೆಯ ಕಾಲಘಟ್ಟದಲ್ಲಿ ಮಾತ್ರ ಅರಮನೆಯಲ್ಲಿ ನಡೆಯುತ್ತಿದ್ದ ರಾಜ ದರ್ಬಾರ್ ಇತಿಹಾಸವಾಗಿದ್ದು, ಅದರ ವೈಭವವನ್ನು, ಸ್ವರೂಪವನ್ನು ನೆನಪಿಸುವ ಸಲುವಾಗಿ ಈ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರಸರು ನಡೆಸುತ್ತಿದ್ದ ದರ್ಬಾರನ್ನು ಈ ಕಾಲದ ಜನರಿಗೆ ತೋರಿಸುವ ಪ್ರಯತ್ನವಾಗಿ ಈ ಕಾರ್‍ಯಕ್ರಮ ನಡೆಸಲಾಗುತ್ತಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಗಳಿಗೆ ಸೀಮೆಯ ಪ್ರತಿಯೊಬ್ಬ ಭಕ್ತರು ಸಹಕರಿಸಬೇಕೆಂದು ತಿಳಿಸಿದರು. ದರ್ಬಾರಿನ ಪರಿಕಲ್ಪನೆಯ ರೂಪುರೇಷೆಗಳನ್ನು ವಿವರಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಸೀಮೆಯ ಧಾರ್‍ಮಿಕ ಶ್ರದ್ಧಾಳು, ಹಿರಿಯರಲ್ಲಿ, ಗುತ್ತಿನ ಮನೆಯವರ ಅಭಿಪ್ರಾಯಗಳನ್ನು ಕೇಳಲಾಯಿತು.
ಸಭೆಯಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ಕೆ, ಜಯರಾಮ ಬಲ್ಲಾಳ್, ಶ್ರೀಕಂಠವರ್ಮ, ಸೀಮೆ ಗುರಿಕ್ಕಾರ ನೆಡ್ಲೆ ಈಶ್ವರ ಭಟ್, ವಿಷ್ಣು ಭಟ್ ಅಡ್ಯೇಯಿ ಪಾದೆಕಲ್ಲು, ಶ್ರೀನಿವಾಸ ರೈ ಕುಂಡಕೋಳಿ, ಮುಳಿಯಗುತ್ತು ಸಂಕಪ್ಪ ಶೇಖ, ಪಡಾರಗುತ್ತು ಭುಜಂಗ ರೈ, ಬಾಲಕೃಷ್ಣ ರೈ ಬೆಂಗ್ರೋಡಿ, ಸದಾಶಿವ ಆಚಾರ್‍ಯಕೆ., ಡಾ. ಗೀತಪ್ರಕಾಶ್ ವಿಟ್ಲ, ಸುಬ್ರಹ್ಮಣ್ಯ ಭಟ್ ದೇರಾಜೆ, ಶೇಖರ್ ಭಟ್ ಪಡಾರು, ಪ್ರಭಾಕರ ಶೆಟ್ಟಿ ದಂಬೆಕಾನ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಜಗತ್ಸಾಂತಪಾ ಅಳಿಕೆ, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಗೋವಿಂದ ರಾಜ್ ಪೆರುವಾಜೆ, ಸಂಘಟನಾ ಕಾರ್‍ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ಸಹ ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ, ಪ್ರಚಾರ ಸಮಿತಿಯ ಉಮೇಶ್ ಮಿತ್ತಡ್ಕ ಇನ್ನಿತರು ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...