Thursday, January 29, 2026

ಕುಂಡಡ್ಕ ಬ್ರಹ್ಮಕಲಶೋತ್ಸವದಲ್ಲಿ ರಾಜ ದರ್ಬಾರ್: ಸಮಾಲೋಚನಾ ಸಭೆ

ವಿಟ್ಲ: ಕುಂಡಡ್ಕ ಪಿಲಿಪ್ಪೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹಾಗೂ ಶಿಬರಿಕಲ್ಲು ಮಾಡ ಶ್ರೀ ಮಲರಾಯ ಹಾಗೂ ಮೂವರು ದೈವಂಗಳ ದೈವಸ್ಥಾನದಲ್ಲಿ ಫೆ. 5 ರಿಂದ 23 ರ ತನಕ ನಡೆಯುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಫೆ.10 ರಂದು ವಿಶೇಷವಾಗಿ ನಡೆಯುವ ರಾಜ ದರ್ಬಾರ್ ಕಾರ್‍ಯಕ್ರಮದ ಬಗ್ಗೆ ಶನಿವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಟಿ. ವೆಂಕಟೇಶ್ವರ ನೂಜಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.
ಅರಸೊತ್ತಿಗೆಯ ಕಾಲಘಟ್ಟದಲ್ಲಿ ಮಾತ್ರ ಅರಮನೆಯಲ್ಲಿ ನಡೆಯುತ್ತಿದ್ದ ರಾಜ ದರ್ಬಾರ್ ಇತಿಹಾಸವಾಗಿದ್ದು, ಅದರ ವೈಭವವನ್ನು, ಸ್ವರೂಪವನ್ನು ನೆನಪಿಸುವ ಸಲುವಾಗಿ ಈ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅರಸರು ನಡೆಸುತ್ತಿದ್ದ ದರ್ಬಾರನ್ನು ಈ ಕಾಲದ ಜನರಿಗೆ ತೋರಿಸುವ ಪ್ರಯತ್ನವಾಗಿ ಈ ಕಾರ್‍ಯಕ್ರಮ ನಡೆಸಲಾಗುತ್ತಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಗಳಿಗೆ ಸೀಮೆಯ ಪ್ರತಿಯೊಬ್ಬ ಭಕ್ತರು ಸಹಕರಿಸಬೇಕೆಂದು ತಿಳಿಸಿದರು. ದರ್ಬಾರಿನ ಪರಿಕಲ್ಪನೆಯ ರೂಪುರೇಷೆಗಳನ್ನು ವಿವರಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಸೀಮೆಯ ಧಾರ್‍ಮಿಕ ಶ್ರದ್ಧಾಳು, ಹಿರಿಯರಲ್ಲಿ, ಗುತ್ತಿನ ಮನೆಯವರ ಅಭಿಪ್ರಾಯಗಳನ್ನು ಕೇಳಲಾಯಿತು.
ಸಭೆಯಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ಕೆ, ಜಯರಾಮ ಬಲ್ಲಾಳ್, ಶ್ರೀಕಂಠವರ್ಮ, ಸೀಮೆ ಗುರಿಕ್ಕಾರ ನೆಡ್ಲೆ ಈಶ್ವರ ಭಟ್, ವಿಷ್ಣು ಭಟ್ ಅಡ್ಯೇಯಿ ಪಾದೆಕಲ್ಲು, ಶ್ರೀನಿವಾಸ ರೈ ಕುಂಡಕೋಳಿ, ಮುಳಿಯಗುತ್ತು ಸಂಕಪ್ಪ ಶೇಖ, ಪಡಾರಗುತ್ತು ಭುಜಂಗ ರೈ, ಬಾಲಕೃಷ್ಣ ರೈ ಬೆಂಗ್ರೋಡಿ, ಸದಾಶಿವ ಆಚಾರ್‍ಯಕೆ., ಡಾ. ಗೀತಪ್ರಕಾಶ್ ವಿಟ್ಲ, ಸುಬ್ರಹ್ಮಣ್ಯ ಭಟ್ ದೇರಾಜೆ, ಶೇಖರ್ ಭಟ್ ಪಡಾರು, ಪ್ರಭಾಕರ ಶೆಟ್ಟಿ ದಂಬೆಕಾನ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಜಗತ್ಸಾಂತಪಾ ಅಳಿಕೆ, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಗೋವಿಂದ ರಾಜ್ ಪೆರುವಾಜೆ, ಸಂಘಟನಾ ಕಾರ್‍ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ಸಹ ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ, ಪ್ರಚಾರ ಸಮಿತಿಯ ಉಮೇಶ್ ಮಿತ್ತಡ್ಕ ಇನ್ನಿತರು ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...