Friday, June 27, 2025

ಕುಂಡಡ್ಕ ಶಿಖರ ಮೆರವಣಿಗೆ: ವಿಶೇಷ ಪೂಜೆ

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಹಾಗೂ ಶಿಬರಿಕಲ್ಲ ಮಾಡ ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ಪ್ರಯುಕ್ತ ಮೂರು ಶಿಖರ ಕಲಶಗಳಿಗೆ ಮಂಗಳವಾರ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಮೆರವಣಿಗೆ ಮೂಲಕ ಕುಂಡಡ್ಕ ದೇವಸ್ಥಾನಕ್ಕೆ ಸಾಗಿಸಲಾಯಿತು.
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕ ನವರಾಜ್ ಅಮೈ ವಿಶೇಷ ಪೂಜೆ ನಡೆಸಿದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ., ಜಯರಾಮ ಬಲ್ಲಾಳ್, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವತಿಯಿಂದ ರಾಮ ಭಟ್ ನೀರಪಳಿಕೆ, ದಯಾನಂದ ಶೆಟ್ಟಿ, ವೇಣುಗೋಪಾಲ ಶೆಟ್ಟಿ, ಚಿದಾನಂದ ಪೆಲತ್ತಿಂಜ, ಪೂವಪ್ಪ ಕರಿಮಣ್ಣು, ದುರ್ಗಾಪ್ರಸಾದ್ ಅತಿಕಾರಬೈಲು, ಮಹಾಬಲಪೂಜಾರಿ ಅಳಕೆಮಜಲು, ವಿಜಯ ಪೂಜಾರಿ ಬಾಕಿಮಾರು, ಪ್ರಸಾದ್ ಮರುವಾಳ, ಸತೀಶ್ಚಂದ್ರ ಪಟ್ಲ, ವಿಜಯ ಬಾಕಿಮಾರು, ಪುರುಷೋತ್ತಮ್ ಕಾರ್ಯಾಡಿ, ಶಿಖರದ ಶಿಲ್ಪಿ ಮುರಳೀಧರನ್ ಪಯ್ಯನ್ನೂರು ಮತ್ತಿತರರು ಉಪಸ್ಥಿತರಿದ್ದರು.

ತಂತ್ರಿಗಳ ಆಗಮನ:
ಸಂಜೆ ಕ್ಷೇತ್ರಕ್ಕೆ ತಂತ್ರಿಗಳಾದ ಕುಂಟುಕುಡೇಲು ರಘುರಾಮ ತಂತ್ರಿಗಳ ಆಗಮಿಸಿದ್ದು, ಪೂರ್ಣಕುಂಭ ಸ್ವಾಗತದ ಮೂಲಕ ಎದುರುಗೊಳ್ಳಲಾಯಿತು. ನೂತನ ಗರ್ಭಗೃಹದ ದೇವಾಲಯದ ಶಿಲ್ಪಿ ಮೇಸ್ತ್ರಿ ಮರದ ಶಿಲ್ಪಗಳಿಂದ ಪರಿಗ್ರಹ, ಸ್ಥಳಶುದ್ದಿ ಸೇರಿ ವಿವಿಧ ಕಾರ್ಯಗಳು ನಡೆದು ವಾಸ್ತು ಹೋಮ, ವಾಸ್ತು ಪೂಜಾ ಬಲಿ, ಅಸ್ತ್ರಕಲಶ ಪೂಜೆ, ಅಸ್ತ್ರಕಲಶಾಧಿವಾಸ ಕ್ರಿಯೆಗಳು ನಡೆಯಿತು. ಕರ್ಗಲ್ಲು ನೂಜಿ, ಕುಡ್ವ, ಕುಳ, ಕುಂಡಡ್ಕ ಮನೆತನಗಳವರು ಈ ಸಂದರ್ಭ ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...