Wednesday, January 28, 2026

ಅಭಿರುಚಿ ಜೋಡುಮಾರ್ಗ ವತಿಯಿಂದ ಕುರುಕ್ಷೇತ್ರ

ಬಂಟ್ವಾಳ: ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮತ್ತು ಅಭಿರುಚಿ ಜೋಡುಮಾರ್ಗ ವತಿಯಿಂದ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿಶುಕ್ರವಾರ ರಾತ್ರಿ ಆಯೋಜಿಸಲಾದ ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯ ಅರ್ಪಿಸಿದ ಜನುಮದಾಟ ಅಭಿನಯದ ಪೌರಾಣಿಕ, ಸಂಗೀತಮಯನಾಟಕ ಕುರುಕ್ಷೇತ್ರ ಪ್ರೇಕ್ಷಕರನ್ನು ದಶಕಗಳ ಹಿಂದಕ್ಕೆ ಕರೆದೊಯ್ಯಿತು.

ಹಿರಿಯ ರಂಗಕರ್ಮಿ ಅಭಿರುಚಿ ಜೋಡುಮಾರ್ಗದ ಮಹಾಬಲೇಶ್ವರ ಹೆಬ್ಬಾರ್, ಸುಂದರ ರಾವ್, ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆರಾಮಚಂದ್ರ ಭಟ್, ಕಸಾಪ ತಾಲೂಕು ಅಧ್ಯಕ್ಷ ಕೆ. ಮೋಹನ ರಾವ್ ಮತ್ತು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶಮಾಂಬಾಡಿ ನಾಟಕಕ್ಕೆ ಚಾಲನೆ ನೀಡಿದರು.

ಬಳಿಕ ಸುಮಾರು ಎರಡೂವರೆ ತಾಸು ಡಾ.ಎಂ.ಗಣೇಶ್ ಹೆಗ್ಗೋಡು ಪರಿಕಲ್ಪನೆ ಮತ್ತು ನಿರ್ದೇಶನದ ಈ ನಾಟಕವನ್ನು ನುರಿತ ಕಲಾವಿದರನ್ನುಒಳಗೊಂಡ ಯುವಕರ ತಂಡ ದಶಕಗಳ ಹಿಂದಿನ ಕಂಪನಿ ನಾಟಕಗಳಲ್ಲಿರುವ ಪರಿಕರಗಳನ್ನು ಬಳಸಿ ಅಭಿನಯಿಸಿ ಗಮನ ಸೆಳೆದರು. ಕುರುಕ್ಷೇತ್ರಯುದ್ಧದ ಪೂರ್ವಭಾವಿ ಸನ್ನಿವೇಶಗಳು ಹಾಗೂ ದ್ರೋಣ, ಅಭಿಮನ್ಯುವಿನ ಅವಸಾನ, ಗದಾಯುದ್ಧದ ಸನ್ನಿವೇಶಗಳನ್ನು ಕಲಾವಿದರು ಕಟ್ಟಿಕೊಟ್ಟರು.ದಾಯಾದಿ ಕಲಹ, ಅಸೂಯೆ, ಮತ್ಸರ, ಸೇಡು ಮೊದಲಾದ ಮನಸ್ಸಿನ ಪಲ್ಲಟಗಳು, ನೋವು, ಕುತಂತ್ರ, ಕುಂತಿ, ಗಾಂಧಾರಿಯ ಪುತ್ರ ವ್ಯಾಮೋಹದಂಥಸನ್ನಿವೇಶಗಳು ಇಂದಿಗೂ ಪ್ರಸ್ತುತ ಎಂಬ ಭಾವನೆ ಮೂಡಿಸುವಂತೆ ಮಾಡಲು ಯಶಸ್ವಿಯಾದವು. ನಾಟಕ ಪ್ರದರ್ಶನದ ಬಳಿಕ ಕಲಾವಿದ ಮಂಜುಸಿರಿಗೇರಿ ನಾಟಕದ ಕುರಿತು ಮಾಹಿತಿ ನೀಡಿದರು. ನ್ಯಾಯವಾದಿ ಅಜಿತ್ ಕುಮಾರ್ ಅಡ್ಡೂರು ಅನಿಸಿಕೆ ವ್ಯಕ್ತಪಡಿಸಿದರು.

More from the blog

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...