Saturday, June 28, 2025

ಅಭಿರುಚಿ ಜೋಡುಮಾರ್ಗ ವತಿಯಿಂದ ಕುರುಕ್ಷೇತ್ರ

ಬಂಟ್ವಾಳ: ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮತ್ತು ಅಭಿರುಚಿ ಜೋಡುಮಾರ್ಗ ವತಿಯಿಂದ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿಶುಕ್ರವಾರ ರಾತ್ರಿ ಆಯೋಜಿಸಲಾದ ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯ ಅರ್ಪಿಸಿದ ಜನುಮದಾಟ ಅಭಿನಯದ ಪೌರಾಣಿಕ, ಸಂಗೀತಮಯನಾಟಕ ಕುರುಕ್ಷೇತ್ರ ಪ್ರೇಕ್ಷಕರನ್ನು ದಶಕಗಳ ಹಿಂದಕ್ಕೆ ಕರೆದೊಯ್ಯಿತು.

ಹಿರಿಯ ರಂಗಕರ್ಮಿ ಅಭಿರುಚಿ ಜೋಡುಮಾರ್ಗದ ಮಹಾಬಲೇಶ್ವರ ಹೆಬ್ಬಾರ್, ಸುಂದರ ರಾವ್, ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆರಾಮಚಂದ್ರ ಭಟ್, ಕಸಾಪ ತಾಲೂಕು ಅಧ್ಯಕ್ಷ ಕೆ. ಮೋಹನ ರಾವ್ ಮತ್ತು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶಮಾಂಬಾಡಿ ನಾಟಕಕ್ಕೆ ಚಾಲನೆ ನೀಡಿದರು.

ಬಳಿಕ ಸುಮಾರು ಎರಡೂವರೆ ತಾಸು ಡಾ.ಎಂ.ಗಣೇಶ್ ಹೆಗ್ಗೋಡು ಪರಿಕಲ್ಪನೆ ಮತ್ತು ನಿರ್ದೇಶನದ ಈ ನಾಟಕವನ್ನು ನುರಿತ ಕಲಾವಿದರನ್ನುಒಳಗೊಂಡ ಯುವಕರ ತಂಡ ದಶಕಗಳ ಹಿಂದಿನ ಕಂಪನಿ ನಾಟಕಗಳಲ್ಲಿರುವ ಪರಿಕರಗಳನ್ನು ಬಳಸಿ ಅಭಿನಯಿಸಿ ಗಮನ ಸೆಳೆದರು. ಕುರುಕ್ಷೇತ್ರಯುದ್ಧದ ಪೂರ್ವಭಾವಿ ಸನ್ನಿವೇಶಗಳು ಹಾಗೂ ದ್ರೋಣ, ಅಭಿಮನ್ಯುವಿನ ಅವಸಾನ, ಗದಾಯುದ್ಧದ ಸನ್ನಿವೇಶಗಳನ್ನು ಕಲಾವಿದರು ಕಟ್ಟಿಕೊಟ್ಟರು.ದಾಯಾದಿ ಕಲಹ, ಅಸೂಯೆ, ಮತ್ಸರ, ಸೇಡು ಮೊದಲಾದ ಮನಸ್ಸಿನ ಪಲ್ಲಟಗಳು, ನೋವು, ಕುತಂತ್ರ, ಕುಂತಿ, ಗಾಂಧಾರಿಯ ಪುತ್ರ ವ್ಯಾಮೋಹದಂಥಸನ್ನಿವೇಶಗಳು ಇಂದಿಗೂ ಪ್ರಸ್ತುತ ಎಂಬ ಭಾವನೆ ಮೂಡಿಸುವಂತೆ ಮಾಡಲು ಯಶಸ್ವಿಯಾದವು. ನಾಟಕ ಪ್ರದರ್ಶನದ ಬಳಿಕ ಕಲಾವಿದ ಮಂಜುಸಿರಿಗೇರಿ ನಾಟಕದ ಕುರಿತು ಮಾಹಿತಿ ನೀಡಿದರು. ನ್ಯಾಯವಾದಿ ಅಜಿತ್ ಕುಮಾರ್ ಅಡ್ಡೂರು ಅನಿಸಿಕೆ ವ್ಯಕ್ತಪಡಿಸಿದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...