Friday, June 27, 2025

ಲಾಯಿಲ: ಯಕ್ಷ ಸಾಂಗತ್ಯ ಸಪ್ತಕ ತಾಳಮದ್ದಳೆ “ಯಕ್ಷಾವತರಣ” ಕಾರ್ಯಕ್ರಮ

ಲಾಯಿಲ: ಲಾಯಿಲ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಭವನದಲ್ಲಿ ಯಕ್ಷ ಸಾಂಗತ್ಯ ಸಪ್ತಕ ತಾಳಮದ್ದಳೆ “ಯಕ್ಷಾವತರಣ” ಕಾರ್ಯಕ್ರಮ ಕಲಾವಿದರ ಪೋಷಣೆಯೊಂದಿಗೆ ಕಲಾರಸಿಕರ ಅಭಿರುಚಿಗೆ ತಕ್ಕಂತೆ ಮೂಡಿಬರುತ್ತಿದೆ.

ಕೊರೊನಾ ಮಹಾಮಾರಿಯು ಕಲಾವಿದರ ಬದುಕನ್ನು ಅಸ್ತವ್ಯಸ್ತ ಮಾಡುವುದರೊಂದಿಗೆ ಕಲೆಯನ್ನು ಆಸ್ವಾದಿಸುವವರಿಗೂ  ಅಡಚಣೆಯನ್ನು ಉಂಟು ಮಾಡಿದೆ. ಹಾಗಾಗಿ ಪ್ರೇಕ್ಷಕ ಹಾಗೂ  ಕಲಾವಿದರ ನಡುವಿನ ಗೋಡೆಯನ್ನು ತೆಗೆದು ಹಾಕಲು ಯಕ್ಷಾವತರಣ ಎಂಬ ಕಾರ್ಯವನ್ನು ಆಯೋಜಿಸಿ ನೇರಪ್ರಸಾರದ ಮೂಲಕ ಮನೆಯಲ್ಲೇ ತಾಳಮದ್ದಳೆ ಆಲಿಸುವಂತಹ ಅವಕಾಶವನ್ನು ಮಾಡಿಕೊಟ್ಟಿದೆ.

ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆ ಕುರಿಯ ವಿಠ್ಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನ, ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ(ರಿ) ಇದರ ಸಹಭಾಗಿತ್ವದಲ್ಲಿ ಉಭಯ ತಿಟ್ಟುಗಳ ಕಲಾವಿದರ ಸಹಕಾರ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರ ಕೃಪಾಶೀರ್ವಾದಗಳೊಂದಿಗೆ ಏಳು ದಿವಸದ ಯಕ್ಷಾವತರಣ ಎನ್ನುವ ತಾಳಮದ್ದಳೆ ಸಪ್ತಾಹವನ್ನು ಹಾಗು ಒಂದು ದಿನದ ಯಕ್ಷಗಾನ ನೃತ್ಯವನ್ನು ಹಮ್ಮಿಕೊಂಡಿದೆ.

ಸಮಯ ಸಂಜೆ 3.45 ರಿಂದ 6.30ರವರೆಗೆ ದಿನಕ್ಕೆ ಆರು ಕಲಾವಿದರಂತೆ 50 ಕಲಾವಿದರಿಗೆ ವೇದಿಕೆಯನ್ನು ನೀಡಿದೆ.

ಈ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅಶೋಕ್ ಭಟ್ ಉಜಿರೆ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...