Wednesday, February 12, 2025

ಶಿವರಾತ್ರಿಯಂದೇ ಶಿವೈಕ್ಯಳಾದ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ “ಲತಾ”

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ‘ಲತಾ’ ಶಿವರಾತ್ರಿಯಂದೇ ಶಿವೈಕ್ಯಳಾಗಿದ್ದಾಳೆ.

60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು.

ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ.

ಕಳೆದ 50 ವರ್ಷಗಳಿಂದ ಧರ್ಮಸ್ಥಳದ ಜಾತ್ರಾಮಹೋತ್ಸವದಲ್ಲಿ ಈ ಲತಾ ಆನೆ ಮದಗಜಗಮನೆಯಂತೆ ಗಾಂಭೀರ್ಯದ ಹೆಜ್ಜೆ ಹಾಕಿ ಎಲ್ಲರ ಚಿತ್ತ ಸೆಳೆಯುತ್ತಿತ್ತು

ಧರ್ಮಸ್ಥಳದಲ್ಲಿ ಸದ್ಯ ಲಕ್ಷ್ಮಿ, ಶಿವಾನಿ ಎಂಬ ಎರಡು ಆನೆಗಳಿವೆ. ಲತಾ ಆನೆ ಈ ಎರಡು ಆನೆಗಳಿಗೂ ತಾಯಿ, ಅಜ್ಜಿಯಾಗಿ ಪ್ರೀತಿಯಿಂದ ವರ್ತಿಸುತ್ತಿತ್ತು. ಶಿವಾನಿ ಆನೆ ತಾಯಿ ಲಕ್ಷ್ಮಿ ಆನೆಗಿಂತಲೂ ಹೆಚ್ಚು ಲತಾ ಆನೆಯೊಂದಿಗೆ ಸಲುಗೆಯಿಂದ ವರ್ತಿಸುತ್ತಿತ್ತು.

ಲತಾ ಆನೆಯ ಅಂತ್ಯ ಸಂಸ್ಕಾರ ಇಂದು ಸಂಜೆ ವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...