Tuesday, February 3, 2026

ರಾಜ್ಯದಲ್ಲಿ ವಾರ ಪೂರ್ತಿ ಲಾಕ್‌ಡೌನ್‌ಗೆ ಸರಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರಕ್ಕೆ ಮುಂದಾಗಿರುವ ರಾಜ್ಯ ಸರಕಾರ ವಾರ ಪೂರ್ತಿ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ ರಾಜ್ಯ ಸರಕಾರದ ಮಾರ್ಗಸೂಚಿ ಪ್ರಕಾರ ವಾರದ ಎಲ್ಲಾ ದಿನ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿದೆ. ಹಾಗೆಯೇ ಶನಿವಾರ ಮತ್ತು ರವಿವಾರ ಇಡೀ ದಿನ ಕರ್ಫ್ಯೂ ಜಾರಿ ಮಾಡಿದೆ. ಆದರೂ ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ವಾರ ಪೂರ್ತಿ ಲಾಕ್‌ಡೌನ್ ಮಾಡುವ ಚಿಂತನೆಯನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ರಾಜ್ಯದಲ್ಲಿ ವೀಕೆಂಡ್ ಮಾತ್ರವಲ್ಲ ವಾರಪೂರ್ತಿ ಕರ್ಫ್ಯೂ ಹೇರಿದರೆ ಒಳ್ಳೆಯದು ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ಜನ ಕೇಳಬೇಕಲ್ಲ. ವಾರವಿಡೀ ಕರ್ಫ್ಯೂ ಜಾರಿ ಮಾಡುವುದು ಬೇಡವೆಂದು ಹೇಳಲಾಗುತ್ತಿದೆ. ಕೆಲವರು ಆರಾಮಾಗಿ ಓಡಾಡಿಕೊಂಡಿದ್ದಾರೆ. ಜನ ಸಾಯುತ್ತಿದ್ದರೂ ಕೆಲವರಿಗೆ ಚಿಂತೆ ಇಲ್ಲ ಎಂದು ಹೇಳಿದ್ದಾರೆ.

ಸರ್ಕಾರ ವಾರದ ಎಲ್ಲಾ ದಿನವೂ ಲಾಕ್ ಡೌನ್ ಮಾಡುವ ಚಿಂತನೆ ಹೊಂದಿತ್ತು. ಪರಿಸ್ಥಿತಿ ರಾಜ್ಯದಲ್ಲಿ ಮತ್ತಷ್ಟು ಕೈಮೀರಿ ಹೋದರೆ ವಾರಪೂರ್ತಿ ಲಾಕ್ಡೌನ್ ಮಾಡುವ ಸಾಧ್ಯತೆ ಇದೆ. ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋದರೆ ಆಗ ವಾರಪೂರ್ತಿ ಲಾಕ್ಡೌನ್ ಜಾರಿಯಾದರೆ ಅಚ್ಚರಿಪಡಬೇಕಿಲ್ಲ. ಸೋಮವಾರದಿಂದ ನೈಟ್ ಕರ್ಫ್ಯೂ ಮಾತ್ರ ಇರುತ್ತದೆ. ಸೋಮವಾರ ಸಂಪುಟ ಸಭೆ ನಡೆಯಲಿದ್ದು, ವಾರ ಪೂರ್ತಿ ಕರ್ಫ್ಯೂ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದು ಎನ್ನಲಾಗಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...