Monday, February 2, 2026

ಲಾಕ್ ಡೌನ್ ಸಂದರ್ಭದಲ್ಲಿ ನಿಯಮ ಮೀರಿ ತಿರುಗಾಟ ನಡೆಸಿದ ಬೈಕ್ ವಶಕ್ಕೆ, ಅನಗತ್ಯ ವಸ್ತಗಳ ಅಂಗಡಿ ಲೈಸೆನ್ಸ್ ರದ್ದು

ಬಂಟ್ವಾಳ: ಲಾಕ್ ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ತಿರುಗಾಟ ನಡೆಸುತ್ತೀರಾ, ಅಗತ್ಯ ವಸ್ತುಗಳ ಅಲ್ಲದೆ ಇತರೆ ಅಂಗಡಿಗಳನ್ನು ತೆರೆದಿಡುತ್ತೀರಾ ನಿಮಗೆ ಕಾದಿದೆ ನೋಡಿ ಗ್ರಹಚಾರ!

ಲಾಕ್ ಡೌನ್ ಅದೇಶ ಉಲ್ಲಂಘಿಸಿ ಅನಗತ್ಯವಾಗಿ ಬಿಸಿರೋಡಿನಲ್ಲಿ ಸುತ್ತಾಡುತ್ತಿದ್ದ ಬೈಕ್ ಒಂದನ್ನು ವಶಕ್ಕೆ ಪಡೆದುಕೊಂಡ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

ಜೊತೆಗೆ ಲಾಕ್ ಡೌನ್ ಅವಧಿಯಲ್ಲಿ ಅಗತ್ಯವಸ್ತುಗಳ ಅಂಗಡಿ ಅಲ್ಲದೆ ಇತರೆ ಸಾಮಾಗ್ರಿಗಳನ್ನು ಮಾರಟ ಮಾಡಲು ತೆರೆದಿಟ್ಟಿದ್ದ ಅಂಗಡಿಯ ಪರವಾನಿಗೆಯನ್ನು ರದ್ದುಪಡಿಸಲು ಪುರಸಭಾ ಮುಖ್ಯಾಧಿಕಾರಿ ಅವರಿಗೆ ತಹಶೀಲ್ದಾರ್ ರಶ್ಮಿ ಸೂಚನೆ ನೀಡಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ವಿನಾ ಕಾರಣ ಸುತ್ತಾಟ ನಡೆಸುವುದು ಹೆಚ್ಚಾಗುವುದು ತಹಶೀಲ್ದಾರ್ ಅವರ ಗಮನಕ್ಕೆ ಬಂದಿದ್ದು ಅವರೇ ನೇರವಾಗಿ ಕಾರ್ಯಚರಣೆಗೆ ಇಳಿದಿದ್ದರು.
ಜಿಲ್ಲಾಡಳಿತ ದಿನಬಳಕೆಯ ವಸ್ತುಗಳಾದ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಿದ್ದಾರೆ. ಅದರೆ ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡ ಕೆಲ ಅಂಗಡಿ ಮಾಲಕರು ಅಗತ್ಯ ವಸ್ತುಗಳ ಅಲ್ಲದ ಅಂಗಡಿಗಳನ್ನು ತೆರವುಗೊಳಿಸುವುದು ಅಂಗಡಿಗಳಲ್ಲಿ ಜನ ಸೇರುವುದು ಇವರ ಗಮನಕ್ಕೆ ಬಂದಿತು. ‌

ಅ ಹಿನ್ನೆಲೆಯಲ್ಲಿ ಕಾರ್ಯಚರಣೆ ಮಾಡಿದ ಸಂದರ್ಭದಲ್ಲಿ ಪುರಸಭಾ ವ್ಯಾಪ್ತಿಯಲ್ಲಿ ಎರಡು ಅಂಗಡಿಗಳು ತೆರೆದಿತ್ತು. ಹಾಗಾಗಿ ಅ ಎರಡು ಅಂಗಡಿಗಳ ಲೈಸೆನ್ಸ್ ರದ್ದು ಮಾಡಿ ಎಂದು ಪುರಸಭಾ ಮುಖ್ಯಾಧಿಕಾರಿ ಅವರಿಗೆ ಸೂಚಿಸಿದ್ದಾರೆ.

ಇನ್ನು ಮುಂದೆ ಲಾಕ್ ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ತಿರುಗಾಟ ನಡೆಸಿದರೆ ಅಥವಾ ಅನಗತ್ಯ ವಸ್ತುಗಳ ಅಂಡಿಗಳ ತೆರೆದರೆ ಕಾನೂನು ಅಡಿಯಲ್ಲಿ ಶಿಕ್ಷೆ ಕಟ್ಟಿಟ್ಟ ಬುತ್ತಿ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...