Wednesday, July 9, 2025

ದೇಶದಾದ್ಯಂತ ಮೇ.3ರ ವರೆಗೆ ಲಾಕ್ ಡೌನ್ ವಿಸ್ತರಣೆ: ಪ್ರಧಾನಿ ಘೋಷಣೆ

ಬಂಟ್ವಾಳ : ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು. ಭಾರತದಲ್ಲಿ ಕೊರೋನಾ ಮಹಾಮಾರಿ ವಿರುದ್ಧ ನಾವು ಹೋರಾಟ ಮಾಡುತಿದ್ದೇವೆ. ಎಲ್ಲಾ ದೇಶವಾಸಿಗಳ ತಪಸ್ಸಿನಿಂದ ಕೊರೋನಾ ತಡೆಯುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ನಿಮ್ಮ ಕಷ್ಟ ವನ್ನು ಸಹಿಸಿಕೊಂಡು ದೇಶಕ್ಕಾಗಿ ಹೊರಡಿದ್ದಿರಿ.

ಕೆಲವರಿಗೆ ಊಟದ ಸಮಸ್ಯೆ ಯಾಗಿದೆ. ಕೆಲವರಿಗೆ ಓಡಾಟದ ಸಮಸ್ಯೆ ಯಾಗಿದೆ. ದೇಶದ ಪ್ರಜೆಗಳಿಗಾಗಿ ಯೋಧರಂತೆ ಹೋರಾಟ ನಡೆಸಿದ್ದೇವೆ.
ವಿದೇಶದಿಂದ ಬಂದವರಿಗೆ 14ದಿನ ಕ್ವಾರಂಟೈನ್ ಮಾಡಿದ್ದೆವೆ.  ಭಾರತದಲ್ಲಿ 550 ಕೇಸ್ ಇದ್ದಾಗ ಲಾಕ್ ಡೌನ್ ಘೋಷಣೆ. ಭಾರತ ಸಮಗ್ರ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡಿದೆ.

19 ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸಿದ ಪ್ರಧಾನಿ. ಮೇ. 3 ರ ವರೆಗೆ ದೇಶದಲ್ಲಿ ಲಾಕ್ ಡೌನ್ ಮುಂದುವರಿಕೆ.  ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಮೊದಲಿಗಿಂತ ಹೆಚ್ಚು ಕಟ್ಟೆಚ್ಚರ. ಹಾಟ್ ಸ್ಪಾಟ್ ಆಗಿ ಬದಲಾಗುವ ಪ್ರದೇಶಗಲ್ಲಿ ಕಠಿಣ ನಿಯಮ.  ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಆ ಪ್ರದೇಶ ಸಂಪೂರ್ಣ ಬಂದ್. ಏ.20ರ ವರೆಗೆ ಕೋರನ ಬಗ್ಗೆ ಅವಲೋಕನ. ಏ. 20 ರಲ್ಲಿ ಕೊರೋನಾ ನಿಯಂತ್ರಣ ಕ್ಕೆ ಬಂದರೆ, ನಿಯಮ ಸಡಿಲಿಕೆ ಸಾಧ್ಯತೆ. ನಾಳೆ ಲಾಕ್ ಡೌನ್ ಪರಿಷ್ಕೃತ ಆದೇಶಗಳ ಕುರಿತು ವಿಸ್ತ್ರತ ಮಾರ್ಗಸೂಚಿ ಬಿಡುಗಡೆ.  ಕೃಷಿ ಕಾರ್ಮಿಕರಿಗೆ ಹೊಸ ಮಾರ್ಗಸೂಚಿ ಅನ್ವಯ ವಿನಾಯಿತಿ.
ಕೊರೋನಾ ಪೀಡಿತರಿಗಾಗಿ ಆಸ್ಪತ್ರೆಗಳಲ್ಲಿ 1ಲಕ್ಷ ಬೆಡ್ ರೆಡಿ. ದಿನಗೂಲಿ ನೌಕರರಿಗೆ
ಕೊರೋನಾ ನಿಯಂತ್ರಣಕ್ಕೆ ಸಪ್ತ ಸೂತ್ರ ಕೊಟ್ಟ ಪ್ರಧಾನಿ ಮೋದಿ :
1.ಮನೆಯ ಹಿರಿಯರ ಬಗ್ಗೆ ಕಾಳಜಿ ವಹಿಸಿ.
2. ಸಾಮಾಜಿಕ ಅಂತರ, ಲಕ್ಷ್ಮಣರೇಖೆ ಪಾಲಿಸಿ.
3. ರೋಗ, ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮಾರ್ಗಸೂಚಿ ಪಾಲಿಸಿ.
4. ಆರೋಗ್ಯ ಸೇತು ಮೊಬೈಲ್ ಆಪ್ ಡೌನ್ಲೋಡ್ ಮಾಡಿ.
5. ನಿರ್ಗತಿಕರಿಗೆ, ಬಡವರಿಗೆ ಸಹಾಯ ಮಾಡುವಂತೆ ಮನವಿ.
6. ಅರೋಗ್ಯ, ಶುಚಿತ್ವ ಕಾರ್ಯಕರ್ತ ರ ಬಗ್ಗೆ ಗಮನವಿರಲಿ.
7. ಕಾರ್ಮಿಕರನ್ನು ಕೆಲಸದಿಂದ ತೆಗಯಬೇಡಿ ಭಾರತ ಸಮಗ್ರ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡಿದೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...