Thursday, January 29, 2026

ಲೊರೆಟ್ಟೊ ಚರ್ಚ್ ನಲ್ಲಿ ತೆನೆ ಹಬ್ಬ ಆಚರಣೆ

ಬಂಟ್ವಾಳ: ಲೊರೆಟ್ಟೊ ಮಾತ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್) ತೆನೆಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ ಅವರು, ವಂ. ರೊಯ್ಸ್ಟನ್, ಭಕ್ತಾದಿಗಳೊಂದಿಗೆ ಬಲಿ ಪೂಜೆಯನ್ನು ಅರ್ಪಿಸಿದರು. ಸಾಮಾಜಿಕ ಅಂತರದೊಂದಿಗೆ ನಡೆದ ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕೋವಿಡ್ -19 ಸೋಂಕಿನ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪರ ಆದೇಶದಂತೆ ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವುದನ್ನು ರದ್ದು ಪಡಿಸಲಾಗಿತ್ತು.

ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ, ಸಾಮಾಜಿಕ ಅಂತರದಿಂದ ಪಾಲ್ಗೊಳ್ಳಲು ಬೇಕಾದ ಆಸನದ ವ್ಯವಸ್ಥೆಯನ್ನು ಚರ್ಚ್ ವಠಾರದಲ್ಲಿ
ಆಯೋಜಿಸಿ ಎಲ್.ಇ.ಡಿ. ಪರದೆಯನ್ನು ಅಳವಡಿಸಿದ್ದರು. ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಇವತ್ತಿನ ಸಂಭ್ರಮದ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...