ಬಂಟ್ವಾಳ: ನಾಯಿಯ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲೋಡಿನ ಲಾರಿಯೊಂದು ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಕೆಲಿಂಜ ಕೊಟ್ಟಾರಿ ಕಟ್ಟೆಯಲ್ಲಿ ಇಂದು ಸಂಜೆ ವೇಳೆ ನಡೆದಿದ್ದು, ಘಟನೆಯಲ್ಲಿ ಲಾರಿ ಚಾಲಕ ಸಿಲುಕಿಕೊಂಡಿದ್ದು ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.


ಕಲ್ಲಡ್ಕದಿಂದ ಪೆರ್ಲ ಕಡೆ ಸಾಗುತ್ತಿದ್ದ ಸಿಮೆಂಟ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದ್ದು, ಚಾಲಕ ಲಾರಿಯೊಳಗೆ ಸಿಲುಕಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಲಾರಿಯೊಳಗೆ ಸಿಲುಕಿಕೊಂಡ ಚಾಲಕನನ್ನು ಸ್ಥಳೀಯರು ಹರಸಾಹಸಪಟ್ಟು ರಕ್ಷಣೆ ಮಾಡಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸಿಮೆಂಟ್ ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿತ್ತು.












