Friday, July 11, 2025

ಲಾರಿ ಚಾಲಕನ ಎಡವಟ್ಟು, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಬೈಕುಗಳು ಜಖಂ

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರವಾಹನಗಳ ಮೇಲೆ ಘನಗಾತ್ರದ ಲಾರಿಯೊಂದು ಹರಿದು ಬೈಕಗಳು ಅಪ್ಪಚ್ಚಿಯಾದ ಘಟನೆ
ಬೆಂಜನಪದವು ಸಮೀಪದ ಕೊಡ್ಮಾನ್ ಕೋಡಿ ಎಂಬಲ್ಲಿ ನಡೆದಿದೆ.


ಯಾವುದೋ ಉದ್ದೇಶದಿಂದ ಬೆಂಜನಪದವು ಗುಡ್ಡವೊಂದಕ್ಕೆ ಬಂದಿದ್ದ ಕಾರೊಂದು ಚಾಲಕನ ಎಡವಟ್ಟಿನಿಂದ ಗುಂಡಿಗೆ ಬಿದ್ದಿತ್ತು.
ಗುಂಡಿಗೆ ಬಿದ್ದ ಕಾರನ್ನು ಎತ್ತಿ ಮೇಲೆಕ್ಕೆ ತರುವ ಉದ್ದೇಶದಿಂದ ಕಾರು ಮಾಲಕನಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಎರಡು ಬೈಕ್ ಗಳಲ್ಲಿ ಬಂದ ಯುವಕರು ಬೈಕನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು.
ಕಾರುನ್ನು ಎತ್ತಲು ಹೋದ ವೇಳೆ ಬೆಂಜನಪದವು ಕಡೆಯಿಂದ ಮಾರಿಪಳ್ಳ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಬೈಕಗಳ ಮೇಲೆ ಹರಿದಿದೆ.
ಘನಗಾತ್ರದ ಲಾರಿ ಬೈಕುಗಳ ಮೇಲೆ ಹರಿದ ಪರಿಣಾಮವಾಗಿ ಬೈಕುಗಳು ಸಂಪೂರ್ಣ ಜಖಂಗೊಂಡಿದೆ. ಬೈಕ್ ತನ್ನ ಮೂಲ ಆಕಾರವನ್ನು ಕಳೆದುಕೊಂಡು ಮುದ್ದೆಯಾಗಿದೆ.
ಬೆಂಜನಪದವು ಕಡೆಯಿಂದ ತಮಿಳುನಾಡಿಗೆ ಮಣ್ಣು ಸಾಗಾಟ ಮಾಡುವ ತಮಿಳುನಾಡು ಮೂಲದ ಬೃಹತ್ ಗಾತ್ರದ ಲಾರಿ,ಮಣ್ಣು ತುಂಬಿಸಿಕೊಂಡು ಬೆಂಜನಪದವು ಕಡೆಯಿಂದ ಬಿಸಿರೋಡಿನ ಕೈಕಂಬ ರಸ್ತೆಗೆ ತೆರಳಬೇಕಿತ್ತು.ಚಾಲಕನಿಗೆ ರಸ್ತೆಯ ಅಂದಾಜು ಇಲ್ಲದೆ, ದಾರಿ ತಪ್ಪಿ ಮಾರಿಪಳ್ಳ ರಸ್ತೆಯಲ್ಲಿ ಸಾಗಿದ್ದಾನೆ.
ಈ ವೇಳೆ ತಿರುವಿನಲ್ಲಿ ಅಧಿಕ ಲೋಡ್ ಹೊಂದಿದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳೆರಡನ್ನು ಎಳೆದುಕೊಂಡು ಹೋಗಿ, ಟೋಟಲ್ ಲಾಸ್ ಗೆ ಹಾಕುವಂತೆ ಪುಡಿಪುಡಿ ಮಾಡಿದೆ.
ಲಾರಿ ಚಾಲಕನ ಅಜಾಗರೂಕತೆಯ ಚಾಲನೆಗೆ ಗ್ರಾಮಸ್ಥರು ಗರಂ ಆಗಿದ್ದು, ಸ್ಥಳದಲ್ಲಿ 112 ಪೋಲೀಸ್ ವಾಹನ ಹಾಗೂ ಎ.ಎಸ್.ಐ.
ಮೋನಪ್ಪ ಗೌಡ ಹಾಗೂ ಚಾಲಕ ವಿಶ್ವನಾಥ ಭೇಟಿ ನೀಡಿದ್ದಾರೆ.

More from the blog

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...