Tuesday, July 1, 2025

ಶಬರಿಮಲೆಯ ಆಚಾರ ವಿಚಾರ ಧಿಕ್ಕರಿಸುವುದು ಉತ್ತಮ ಬೆಳವಣಿಗೆಯಲ್ಲ

ಮಾಣಿಲ: ಶಬರಿಮಲೆ ಪುಣ್ಯ ಕ್ಷೇತ್ರದ ಆಚಾರ ವಿಚಾರಗಳು ವ್ಯವಸ್ಥಿತವಾಗಿ ನಡೆಯತಕ್ಕ ಕಾಲಘಟ್ಟದಲ್ಲಿ ಅದನ್ನು ಧಿಕ್ಕರಿಸುವ ಕಾರ್‍ಯ ಉತ್ತಮ ಬೆಳವಣಿಗೆಯಲ್ಲ. 48 ದಿನಗಳ ಬ್ರಹ್ಮಚರ್‍ಯವನ್ನು ಪಾಲಿಸಬೇಕಾಗಿರುವುದು ಸಂಪ್ರದಾಯ. ಆದರೆ ಪರಿವರ್ತನೆಯ ಪರಿಸ್ಥಿತಿಗಳು ರಕ್ತಪಾತ, ಅಶಾಂತಿ, ದುರವಸ್ಥೆಗೆ ಕಾರಣವಾಗುವಂತೆ ಮಾಡುತ್ತಿದೆ. ಪುಣ್ಯ ಕ್ಷೇತ್ರದ ಪಾವಿತ್ರ್ಯ ಕಾಪಾಡಬೇಕಾದ ಅನಿವಾರ್ಯತೆ ಹಿಂದೂ ಸಮಾಜಕ್ಕೆ ಇದೆ. ಕ್ಷೇತ್ರಗಳ ನಿಯಮಗಳನ್ನು ತಪ್ಪಿಸುವುದರ ಪರಿಣಾಮ ದೇಶ ದುರಂತಗಳನ್ನು ಎದುರಿಸಬೇಕಾಗುತ್ತದೆ. ಸಮಾಜ ಜಾಗೃತವಾಗಿ ದುಸ್ಥಿತಿ ಸಂಭವಿಸದಂತೆ ಜಾಗರೂಕರಾಗಬೇಕು. ವ್ರತ ನಿಷ್ಠೆಯಲ್ಲಿ ಕಟ್ಟು ನಿಟ್ಟಿನ ಬದ್ಧತೆಯನ್ನು ಕಾಪಾಡಬೇಕು. ಸಮಾಜದಲ್ಲಿ ಅನರ್ಥಗಳು ಘಟಿಸದಂತೆ ಭಕ್ತರು ಮಾನಸಿಕವಾಗಿ ಸುದೃಢವಾಗಿರಬೇಕು. ದುರ್ಘಟನೆ ಮರುಕಳಿಸದಂತೆ ಭಕ್ತ ವೃಂದ ಎಚ್ಚರ ವಹಿಸಬೇಕು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...