Wednesday, February 12, 2025

ಶಬರಿಮಲೆಯ ಆಚಾರ ವಿಚಾರ ಧಿಕ್ಕರಿಸುವುದು ಉತ್ತಮ ಬೆಳವಣಿಗೆಯಲ್ಲ

ಮಾಣಿಲ: ಶಬರಿಮಲೆ ಪುಣ್ಯ ಕ್ಷೇತ್ರದ ಆಚಾರ ವಿಚಾರಗಳು ವ್ಯವಸ್ಥಿತವಾಗಿ ನಡೆಯತಕ್ಕ ಕಾಲಘಟ್ಟದಲ್ಲಿ ಅದನ್ನು ಧಿಕ್ಕರಿಸುವ ಕಾರ್‍ಯ ಉತ್ತಮ ಬೆಳವಣಿಗೆಯಲ್ಲ. 48 ದಿನಗಳ ಬ್ರಹ್ಮಚರ್‍ಯವನ್ನು ಪಾಲಿಸಬೇಕಾಗಿರುವುದು ಸಂಪ್ರದಾಯ. ಆದರೆ ಪರಿವರ್ತನೆಯ ಪರಿಸ್ಥಿತಿಗಳು ರಕ್ತಪಾತ, ಅಶಾಂತಿ, ದುರವಸ್ಥೆಗೆ ಕಾರಣವಾಗುವಂತೆ ಮಾಡುತ್ತಿದೆ. ಪುಣ್ಯ ಕ್ಷೇತ್ರದ ಪಾವಿತ್ರ್ಯ ಕಾಪಾಡಬೇಕಾದ ಅನಿವಾರ್ಯತೆ ಹಿಂದೂ ಸಮಾಜಕ್ಕೆ ಇದೆ. ಕ್ಷೇತ್ರಗಳ ನಿಯಮಗಳನ್ನು ತಪ್ಪಿಸುವುದರ ಪರಿಣಾಮ ದೇಶ ದುರಂತಗಳನ್ನು ಎದುರಿಸಬೇಕಾಗುತ್ತದೆ. ಸಮಾಜ ಜಾಗೃತವಾಗಿ ದುಸ್ಥಿತಿ ಸಂಭವಿಸದಂತೆ ಜಾಗರೂಕರಾಗಬೇಕು. ವ್ರತ ನಿಷ್ಠೆಯಲ್ಲಿ ಕಟ್ಟು ನಿಟ್ಟಿನ ಬದ್ಧತೆಯನ್ನು ಕಾಪಾಡಬೇಕು. ಸಮಾಜದಲ್ಲಿ ಅನರ್ಥಗಳು ಘಟಿಸದಂತೆ ಭಕ್ತರು ಮಾನಸಿಕವಾಗಿ ಸುದೃಢವಾಗಿರಬೇಕು. ದುರ್ಘಟನೆ ಮರುಕಳಿಸದಂತೆ ಭಕ್ತ ವೃಂದ ಎಚ್ಚರ ವಹಿಸಬೇಕು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...