Sunday, February 1, 2026

ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಗೆ ಚಪ್ಪರ ಮುಹೂರ್ತ ಮತ್ತು ಪ್ರಥಮ ಚೆಂಡು

 

ಮಾಣಿ: ಫೆ.6 ರಂದು ನಡೆಯಲಿರುವ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ಪ್ರಯುಕ್ತ ಪೂರ್ವಭಾವಿ ಯಾಗಿ ಮಾಣಿ ಉಳ್ಳಾಲ್ತಿ ದೈವಸ್ಥಾನದ ಅಂಗಣಕ್ಕೆ ಚಪ್ಪರ ಮುಹೂರ್ತ ಇಂದು ಬೆಳಿಗ್ಗೆ ಸುಮಾರು ಹನ್ನೊಂದು ಗಂಟೆಯ ವೇಳೆ ನಡೆಯಿತು.

ಪಳನೀರು ಅನಂತ ಭಟ್ ಅವರ ಪೌರೋಹಿತ್ಯ ದಲ್ಲಿ ವಿಧಿಬದ್ದವಾಗಿ ಚಪ್ಪರ ಮೂಹೂರ್ತ ನಡೆದ ಬಳಿಕ ಮಾಣಿ ಉಳ್ಳಾಲ್ತಿ ಮೆಚ್ಚಿ ಗೆ ಅಣಿ ಕಟ್ಟಲು ಬೇಕಾಗುವ ಅಡಿಕೆ ಹಾಲೆಯನ್ನು ತರಲು ಸಂಪ್ರದಾಯದಂತೆ ಕೆದಿಲ ಮನೆಗೆ ತೆರಳಿ , ಅಲ್ಲಿಂದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಒಂದೇ ಅಡಿಕೆ ಮರದಿಂದ ಒಂದು ಹಾಲೆ ಹಿಂಗಾರ, ಒಂದು ಕಿಲೆ ಅಡಿಕೆ, ಒಂದು ಅಡಿಕೆ ಹಾಲೆಯನ್ನು ತೆಗೆದು ಮೂಹೂರ್ತ ಮಾಡಲಾಗುತ್ತದೆ, ಬಳಿಕ ಬೇಕಾಗುವಷ್ಟು ಹಾಲೆಯನ್ನು ಸಂಗ್ರಹಿಸಲಾಗುತ್ತದೆ.
ಅಲ್ಲಿಂದ ತರಿಸಲಾದ ಹಾಲೆಗೆ ಪೌರೋಹಿತ್ಯ ನಡೆದ ಬಳಿಕ ಬಾಕಿಮಾರು ಗದ್ದೆಯಲ್ಲಿ ಪ್ರಥಮ ಚೆಂಡು ಇಂದು ನಡೆಯಿತು.
ಇಂದಿನಿಂದ ಮೂರು ದಿನಗಳ ಕಾಲ ಬಾಕಿಮಾರು ಗದ್ದೆಯಲ್ಲಿ ಚೆಂಡು ಹಾಕುವ ಕಾರ್ಯ ಕ್ರಮ ಸಂಪ್ರದಾಯದಂತೆ ನಡೆಯುತ್ತದೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...