Sunday, February 9, 2025

ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಗೆ ಚಪ್ಪರ ಮುಹೂರ್ತ ಮತ್ತು ಪ್ರಥಮ ಚೆಂಡು

 

ಮಾಣಿ: ಫೆ.6 ರಂದು ನಡೆಯಲಿರುವ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ಪ್ರಯುಕ್ತ ಪೂರ್ವಭಾವಿ ಯಾಗಿ ಮಾಣಿ ಉಳ್ಳಾಲ್ತಿ ದೈವಸ್ಥಾನದ ಅಂಗಣಕ್ಕೆ ಚಪ್ಪರ ಮುಹೂರ್ತ ಇಂದು ಬೆಳಿಗ್ಗೆ ಸುಮಾರು ಹನ್ನೊಂದು ಗಂಟೆಯ ವೇಳೆ ನಡೆಯಿತು.

ಪಳನೀರು ಅನಂತ ಭಟ್ ಅವರ ಪೌರೋಹಿತ್ಯ ದಲ್ಲಿ ವಿಧಿಬದ್ದವಾಗಿ ಚಪ್ಪರ ಮೂಹೂರ್ತ ನಡೆದ ಬಳಿಕ ಮಾಣಿ ಉಳ್ಳಾಲ್ತಿ ಮೆಚ್ಚಿ ಗೆ ಅಣಿ ಕಟ್ಟಲು ಬೇಕಾಗುವ ಅಡಿಕೆ ಹಾಲೆಯನ್ನು ತರಲು ಸಂಪ್ರದಾಯದಂತೆ ಕೆದಿಲ ಮನೆಗೆ ತೆರಳಿ , ಅಲ್ಲಿಂದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಒಂದೇ ಅಡಿಕೆ ಮರದಿಂದ ಒಂದು ಹಾಲೆ ಹಿಂಗಾರ, ಒಂದು ಕಿಲೆ ಅಡಿಕೆ, ಒಂದು ಅಡಿಕೆ ಹಾಲೆಯನ್ನು ತೆಗೆದು ಮೂಹೂರ್ತ ಮಾಡಲಾಗುತ್ತದೆ, ಬಳಿಕ ಬೇಕಾಗುವಷ್ಟು ಹಾಲೆಯನ್ನು ಸಂಗ್ರಹಿಸಲಾಗುತ್ತದೆ.
ಅಲ್ಲಿಂದ ತರಿಸಲಾದ ಹಾಲೆಗೆ ಪೌರೋಹಿತ್ಯ ನಡೆದ ಬಳಿಕ ಬಾಕಿಮಾರು ಗದ್ದೆಯಲ್ಲಿ ಪ್ರಥಮ ಚೆಂಡು ಇಂದು ನಡೆಯಿತು.
ಇಂದಿನಿಂದ ಮೂರು ದಿನಗಳ ಕಾಲ ಬಾಕಿಮಾರು ಗದ್ದೆಯಲ್ಲಿ ಚೆಂಡು ಹಾಕುವ ಕಾರ್ಯ ಕ್ರಮ ಸಂಪ್ರದಾಯದಂತೆ ನಡೆಯುತ್ತದೆ.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...