Wednesday, January 28, 2026

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಏ.ಟಿ.ಎಂ ಗೆ ಸಾರ್ವಜನಿಕರ ಆಗ್ರಹ

ಬಂಟ್ವಾಳ: ಗ್ರಾಮಾಂತರ ಪ್ರದೇಶಗಳ ಕೇಂದ್ರ ,ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಸಂಗಮ ಸ್ಥಾನ ಮಾಣಿ ಊರಿನಲ್ಲಿ ಈಗಾಗಲೇ ಬ್ಯಾಂಕ್ ಆಫ್ ಬರೋಡ ರಾಷ್ಟ್ರೀಕೃತ ಬ್ಯಾಂಕ್ ಇದ್ದು, ಮತ್ತೊಂದು ಎ.ಟಿ.ಎಂ. ಸಹಿತ ರಾಷ್ಟ್ರೀಕೃತ ಬ್ಯಾಂಕ್ ಬೇಕು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತದೆ.

ಈಗಾಗಲೇ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಬ್ಯಾಂಕಿಂಗ್ ವ್ಯವಹಾರಕ್ಕೆ ಸರದಿ ಸಾಲಲ್ಲಿ ನಿಂತು ಕಷ್ಟ ಅನುಭವಿಸಿದ ಹಿನ್ನೆಲೆ  ಮತ್ತೊಂದು ರಾಷ್ಟ್ರೀಕೃತ ಬ್ಯಾಂಕು ಅವಶ್ಯಕತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಮಾಣಿಯಲ್ಲಿ ಇರುವ ಬ್ಯಾಂಕ್ ಆಫ್ ಬರೋಡದ ಬ್ಯಾಂಕ್ ಶಾಖೆಯಲ್ಲಿ ಜನದಟ್ಟಣೆ ಯಾವಾಗಲೂ ಇರುವುದರಿಂದ ತುರ್ತು ಬ್ಯಾಂಕಿಂಗ್ ವ್ಯವಹಾರದ ಅವಶ್ಯಕತೆ ಇರುವ ಜನರು ಮಾತ್ರವಲ್ಲದೆ ಮಾಣಿ ಗ್ರಾಮದ ಹೆಚ್ಚಿನ ಗ್ರಾಮಸ್ಥರು ಕಲ್ಲಡ್ಕ, ಕಬಕ, ಪುತ್ತೂರು, ಬಿ.ಸಿ. ರೋಡ್ ನ ಬೇರೆ ಬೇರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬ್ಯಾಂಕಿಂಗ್ ವ್ಯವಹಾರಕ್ಕೆ ಅವಲಂಬಿಸಿದ್ದಾರೆ. ಮಾಣಿಯಲ್ಲಿ ಬ್ಯಾಂಕ್ ಆಫ್ ಬರೋಡ ದ ಏ.ಟಿ.ಎಂ. ಕಾರಣಾಂತರಗಳಿಂದ ಸ್ತಗಿತಗೊಂಡಿದೆ. ಜನರಿಗೆ ತುರ್ತು ಹಣ ಪಡೆಯಲು, ಕಡಿಮೆ ವಿದ್ಯಾಬ್ಯಾಸ ಹೊಂದಿದ ಗ್ರಾಮೀಣ ಪ್ರದೇಶದ ಜನರಿಗೆ ಏ.ಟಿ.ಎಂ.ಮತ್ತು ನೆಟ್ ಬ್ಯಾಂಕಿಂಗ್, ಗೂಗಲ್ ಪೇ, ಫೋನ್ ಪೇ ನಂತಹ ಕ್ಯಾಶ್ ಲೆಸ್ ವ್ಯವಸ್ಥೆ ಬಳಸಲು ಗೊತ್ತಿಲ್ಲ. ಆದ್ದರಿಂದ ಮಾಣಿಯಲ್ಲಿ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ ಆಗಲೇಬೇಕು ಎಂಬ ಜನರ ಬಹು ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ದರಿಂದ ಶೀಘ್ರವಾಗಿ ಮಾಣಿ ಊರಿಗೆ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್ ಆರಂಭವಾಗಲಿ ಸಂಬಂಧಪಟ್ಟ ಜನಪ್ರತಿನಿದಿಗಳು ,ಅದಿಕಾರಿಗಳು ಈ ಬಗ್ಗೆ ಗಮನಹರಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...