ಬಂಟ್ವಾಳ: ಸಾಮರಸ್ಯದಿಂದ ಸಂಘಟನೆಯನ್ನು ಬಲಪಡಿಸಬಹುದು. ಆರ್ಥಿಕವಾಗಿ ಹಿಂದುಳಿದವರ ಬಗ್ಗೆ ಚಿಂತಿಸಿ ಅವರಿಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಮಾಣಿ ವಲಯ ಬಂಟರ ಸಂಘದ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಮಾಜಿ ಉಪಾಧ್ಯಕ್ಷೆ ಕಲ್ಲಾಜೆಗುತ್ತು ಪ್ರಫುಲ್ಲ ಆರ್ ರೈ ಹೇಳಿದರು.

ಅವರು ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಜರಗಿದ ಅಭಿನಂದನಾ ಸಮಾರಂಭ ಮತ್ತು ನೂತನ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಾಣಿ ವಲಯ ಬಂಟರ ಸಂಘದ ಗೌರವಾಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ ಇವರು ವಹಿಸಿದ್ದರು.
ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿಯವರು ಸಂಘದ ನೂತನ ಲಾಂಛನ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿಯವರು ಭಾಗವಹಿಸಿದ್ದರು.
ಸಂಘದ ನಿಯೋಜಿತ ಅಧ್ಯಕ್ಷರಾದ ಬಿ.ಎಂ.ಗಂಗಾಧರ ರೈಯನರು ಮಾತನಾಡಿ, ಮುಂದಿನ ಅವಧಿಗೆ ಎಲ್ಲರ ಸಹಕಾರ ಯಾಚಿಸಿದರು.
ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ, ರಾಜ್ಯ ರೈತರತ್ನ ಪ್ರಶಸ್ತಿ ವಿಜೇತ ನಾಗರಾಜ ಶೆಟ್ಟಿ ಸಾಗು ಮತ್ತು ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತರಾದ ಉದಯ ರೈ ಮಂದಾರ ಇವರನ್ನು ಸನ್ಮಾನಿಸಲಾಯಿತು.
ವಲಯದ ನೂತನ ಪಂಚಾಯತ್ ಸದಸ್ಯರು ಮತ್ತು ಸಹಕಾರ ಸಂಘದ ನಿರ್ದೇಶಕರನ್ನು ಗೌರವಿಸಲಾಯಿತು. ಕಳೆದ ಸಾಲಿನ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಂಘದ ನೋಂದಣಿಯಲ್ಲಿ ಸಹಕರಿಸಿದ ನ್ಯಾಯವಾದಿ ಪ್ರೇಮನಾಥ್ ಶೆಟ್ಟಿ, ನೂತನ ಲಾಂಛನದ ವಿನ್ಯಾಸದಲ್ಲಿ ಸಹಕರಿಸಿದ ರವಿಕಿರಣ್ ರೈ ಮತ್ತು ಸುಜಿತ್ ರೈ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವಾಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಪದಾಧಿಕಾರಿಗಳಾದ ವಿಶ್ವನಾಥ ರೈ ಬಾಲ್ಯೊಟ್ಟು, ಮಮತಾ ಆಳ್ವ, ರತ್ನಾಕರ ರೈ ಶಬರಿ, ಸಜಿತ್ ಶೆಟ್ಟಿ ಜಡ್ತಿಲ, ನಿರಂಜನ್ ರೈ ಕುರ್ಲೆತ್ತಿಮಾರು, ಸುಖೇಶ್ ರೈ ಅಮೈ, ವಿನಿತ್ ಶೆಟ್ಟಿ ಪೆರಾಜೆ, ವಿಂದ್ಯಾ ರೈ, ವಿನಿತಾ ಶೆಟ್ಟಿ, ಜ್ಯೋತಿ ಶೆಟ್ಟಿ, ಮೋಹಿನಿ ರೈ, ಜ್ಯೋತಿ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಪ್ರವೀಣ್ ರೈ ಕಲ್ಲಾಜೆ ಸ್ವಾಗತಿಸಿದರು. ಪ್ರಾಂಶುಪಾಲರಾದ ಗಂಗಾಧರ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ವಿಜೇತ್ ರೈ ಬಿಳಿಯೂರು ವಂದಿಸಿದರು. ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ.ವಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
