Monday, January 26, 2026

ಶ್ರೀರಾಮ ದೇವರ ಪ್ರತಿಷ್ಠೆ, ಬ್ರಹ್ಮಕಲಶ ಸಮಾರಂಭ : ಕಾರ್ಯಕರ್ತರ ಸಮಾವೇಶ

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀರಾಮ ದೇವರ ಪ್ರತಿಷ್ಠೆ, ಬ್ರಹ್ಮಕಲಶ ಸಮಾರಂಭದ ಹತ್ತಾರು ದಿನಗಳಲ್ಲಿ ವಿವಿಧ ರೀತಿಯಲ್ಲಿ ಸಹಕರಿಸಿದ ಕಾರ್ಯಕರ್ತರ ಸಮಾವೇಶ ರವಿವಾರ ಏರ್ಪಡಿಸಲಾಗಿತ್ತು.

ಕ್ರಿಯಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿ, ಮಾತನಾಡಿ, ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶೀರ್ವಾದಗಳಿಂದ ಸ್ಥಾಪಿಸಲ್ಪಟ್ಟ ಸಮರ್ಥ ಸಂಘಟನೆಗಳ ಮೂಲಕ ಕಾರ್ಯಕರ್ತರ ಸೇವೆ ಅನನ್ಯವಾಗಿತ್ತು. ದೋಷರಹಿತವಾಗಿ ಕಾರ್ಯಕ್ರಮ ಸಂಪನ್ನಗೊಳ್ಳಲು ಕಾರ್ಯಕರ್ತರ ತನುಮನಧನಗಳ ಸೇವೆ ಕಾರಣ. ಅವರೆಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.

ಸಮಿತಿ ಕಾರ್ಯದರ್ಶಿ ಬಂಗಾರಡ್ಕ ಜನಾರ್ದನ ಭಟ್ ಅವರು ಶಿಲಾಮಯ ಗರ್ಭಗುಡಿ ನಿರ್ಮಾಣ ಮತ್ತು ಬ್ರಹ್ಮಕಲಶ ಸಮಾರಂಭದ ಲೆಕ್ಕಪತ್ರ ಮಂಡಿಸಿದರು.

ಇದೇ ಸಂದರ್ಭದಲ್ಲಿ ಶ್ರೀರಾಮದೇವರಿಗೆ ಚಿನ್ನದ ಕವಚ ಸಮರ್ಪಿಸಿದ ಚಂದ್ರಶೇಖರ ಭಟ್ ಮುರ್ಗಜೆ, ದಾನಿಗಳಾದ ಪಾದೆಕಲ್ಲು ವಿಷ್ಣು ಭಟ್, ರಮೇಶ್ ಭಟ್ ಸರವು ದಂಪತಿ, ಉದಯಶಂಕರ ಭಟ್ ಮಿತ್ತೂರು ಅವರನ್ನು ಗೌರವಿಸಲಾಯಿತು.

ಕ್ರಿಯಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಕಾರ್ಯದರ್ಶಿ ಬಂಗಾರಡ್ಕ ಜನಾರ್ದನ ಭಟ್, ವ್ಯವಸ್ಥಾಪಕ ಶಿವಪ್ರಸಾದ್ ಭಟ್, ಪ್ರಸನ್ನ ಭಟ್, ಸುಬ್ರಹ್ಮಣ್ಯ ಭಟ್ ಅವರನ್ನು ಗೌರವಿಸಲಾಯಿತು.

ವೇಣು ಕೆದ್ಲ, ಮೈಕೆ ಗಣೇಶ್ ಭಟ್, ಮುರಳಿಕೃಷ್ಣ ಕುಕ್ಕಿಲ, ಯು.ಎಸ್.ವಿಶ್ವೇಶ್ವರ ಭಟ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...