Friday, June 27, 2025

ಮಾಣಿಯಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ: ಕಂಗಾಲಾದ ಗ್ರಾಹಕರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ವಿದ್ಯುತ್ ಪವರ್ ಕಟ್, ವಯರ್ ಕಟ್ ಆದ್ರೆ ವಿದ್ಯುತ್ ಪೂರೈಕೆ ಜೊತೆಯಲ್ಲಿ ಬಿ.ಎಸ್.ಎನ್.ಎಲ್ ಮೊಬೈಲ್ ನೆಟ್ವರ್ಕ್ ಕೂಡ ಇರುವುದಿಲ್ಲ. ಇದಕ್ಕೆ ದೂರವಾಣಿ ಕೇಂದ್ರದ ಜನರೇಟರ್ ವ್ಯವಸ್ತೆ ಸರಿ ಇಲ್ಲ, ಉದ್ಯಮದ ನಷ್ಟ,ಖಾಸಗಿ ರಂಗದ ಸ್ಪರ್ದೆ ,ಸಿಬ್ಬಂದಿ ಕೊರತೆ ನಾನಾ ಕಾರಣ ಇರಬಹುದು. ಇದರಿಂದ ಗ್ರಾಹಕರಿಗೆ ತುಂಬಾ ತೊಂದರೆ ಆಗಿದೆ. ಇದರಿಂದ ಬೇಸತ್ತ ಕೆಲವು ಹಾಲಿ ಬಿ.ಎಸ್.ಎನ್.ಎಲ್ ಗ್ರಾಹಕರು ಇನ್ನಿತರ ಮೊಬೈಲ್ ನೆಟ್ವರ್ಕ್ ಕಂಪೆನಿಗಳಾದ ಐಡಿಯಾ, ಜಿಯೋ, ಏರ್ಟೆಲ್ ನತ್ತ ತಮ್ಮ ಬಿ.ಎಸ್.ಎನ್.ಎಲ್ ನಂಬರನ್ನು ಪೋರ್ಟೆಬಿಲಿಟಿ ಮಾಡುವತ್ತ ಮನಸ್ಸು ಮಾಡುತ್ತಿದ್ದಾರೆ. ಇನ್ನಾದರೂ ಬಿ.ಎಸ್.ಎನ್.ಎಲ್ ಈ ಸಮಸ್ಯೆ ಪರಿಹರಿಸದಿದ್ದರೆ ತನ್ನ ಕೆಟ್ಟ ಸೇವೆಯಿಂದ ಗ್ರಾಹಕರನ್ನು ಕಳೆದುಕೊಳ್ಳುವ ಸನ್ನಿವೇಶ ಮುಂದಿನ ದಿನಗಳಲ್ಲಿ ದಟ್ಟವಾಗಿದೆ. ಇನ್ನಾದರು ಸಂಬಂಧ ಪಟ್ಟವರು ಎಚ್ಚೆತ್ತುಕೊಳ್ಳಲಿ ಎಂದು ಆಶಿಸೋಣ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...